Focus NewsImportant
Trending

ಕೊಲೆ ಪ್ರಕರಣದ ಪ್ರಮುಖ ಆರೋಪಿ ಬಂಧನ: ನ್ಯಾಯಾಧೀಶರ ಮುಂದೆ ಹಾಜರು

ಭಟ್ಕಳ : ತಾಲೂಕಿನ ಹಾಡುವಳ್ಳಿ ಭೀಕರ ಕೊಲೆ ಪ್ರಕರಣಕ್ಕೆ ಸಂಬoಧಿಸಿದoತೆ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ನಂತರ ಪೊಲೀಸರು ಆರೋಪಗಳನ್ನು ಮನೆಗೆ ಕರೆದುಕೊಂಡು ಹೋಗಿ ಮನೆಯ ಕೋಣೆಯಲ್ಲಿನ ಮಹಡಿ ಮೇಲೆ ಕೊಲೆಗೆ ಬಳಸಿದ ಕತ್ತಿಯನ್ನು ವಶಪಡಿಸಿಕೊಂಡರು. ಅಲ್ಲದೆ, ಈ ವೇಳೆ ಮೊಬೈಲ್ ಪೋನ್,ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದುಕೊಂಡರು.

ಪಂಚರ್ ತೆಗೆಯುತ್ತಿದ್ದ ವೇಳೆ ದುರ್ಮರಣ ಹೊಂದಿದ ಕ್ಲೀನರ್ : ಆಸ್ಪತ್ರೆ ಸೇರಿದ ಓನರ್: ಹಿಟ್ ಎಂಡ್ ರನ್ ಕೇಸ್ ದಾಖಲು ?

ನoತರ ಘಟನೆಯ ಸ್ಥಳಕ್ಕೆ ತೆರಳಿ ಸ್ಥಳ ಮಹಜರು ನಡೆಸಿ ಕೊಲೆ ಪ್ರಕರಣಕ್ಕೆ ಸಂಬoಧಿಸಿದoತೆ ಆರೋಪಿಗಳ ಹತ್ತಿರ ಪೋಲಿಸರು ಹೆಚ್ಚಿನ ಮಾಹಿತಿಯನ್ನು ಪಡೆದು ಕೊಂಡರು.ಸ್ಥಳದಲ್ಲಿ ನೂರಾರು ಜನರು ಜಮಾ ಗೊಂಡು ಆರೋಪಗಳಿಗೆ ಹಿಡಿಶಾಪ ಹಾಕಿದರು. ನಾಲ್ವರ ಹತ್ಯಾ ಪ್ರಕರಣಕ್ಕೆ ಸಂಬoಧಿಸಿದoತೆ ಪ್ರಮುಖ ಆರೋಪಿ ವಿನಯ್ ಭಟ್, ಆತನ ತಂದೆ ಶ್ರೀಧರ ಭಟ್ ಬಂಧನದೊoದಿಗೆ ಒಟ್ಟು ಬಂಧಿತರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಕೊಲೆಗೆ ಕುಮ್ಮಕ್ಕು ನೀಡಿದ್ದಾರೆ ಎಂಬ ಆರೋಪದ ಮೇರೆಗೆ ಶಂಭು ಭಟ್ಟರ ಸೊಸೇ ವಿದ್ಯಾ ಭಟ್ಟರನ್ನು ಈಗಾಗಲೇ ಪೊಲೀಸರು ಬಂಧಿಸಿ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದಾರೆ. ಈ ಸಂದರ್ಭದಲ್ಲಿ ಸಿಪಿಐ ಚಂದನ ಗೋಪಾಲ,ಪಿ.ಎಸ್.ಐ ಶ್ರೀಧರ ನಾಯ್ಕ ಮುಂತಾದವರು ಉಪಸ್ಥಿತಿ ಇದ್ದರು.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Back to top button