Uttara Kannada
Trending
ರಸ್ತೆಯಲ್ಲಿ ನಿಲ್ಲಿಸಿದ್ದ ಬುಲೆಟ್ಗೆ ಬೆಂಕಿ: ಮೀನು ತೆಗೆದುಕೊಂಡು ಬಂದ ಸವಾರನಿಗೆ ಕಾದಿತ್ತು ಶಾಕ್
ಕಾರವಾರ: ರಸ್ತೆಬದಿಯಲ್ಲಿ ಬುಲೆಟ್ ಬೈಕ್ ಇಟ್ಟು, ಮೀನುತರಲು ತೆರಳಿದ್ದ ಸವಾರನಿಗೆ ಶಾಕ್ ಕಾದಿತ್ತು. ಹೌದು, ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ ಮೀನು ತರಲು ತೆರಳಿದ್ದ ವೇಳೆ, ಬುಲೆಟ್ಗೆ ಏಕಾಏಕಿ ಬೆಂಕಿ ಹೊತ್ತುಕೊಂಡು, ಧಗಧಗನೆ ಹೊತ್ತಿ ಉರಿದಿದೆ. ಬೈಕ್ನ ಪೆಟ್ರೋಲ್ ಟ್ಯಾಂಕ್ನಲ್ಲಿ ಪೆಟ್ರೋಲ್ ಫುಲ್ ಇದ್ದ ಕಾರಣ, ಬೆಂಕಿ ಕೆನ್ನಾಲಿಗೆ ಚಾಚಿದ್ದು, ಬಹುತೇಕ ಬೈಕಿನ ಭಾಗಗಳು ಸುಟ್ಟು ಭಸ್ಮವಾಗಿದೆ. ಬೈಕ್ಗೆ ಹೇಗೆ ಬೆಂಕಿ ಹೊತ್ತಿಕೊಂಡಿತು ಎನ್ನುವುದು ಇನ್ನೂ ನಿಗೂಢವಾಗಿದೆ. ಕಿಡಿಗೇಡಿಗಳ ಕೃತ್ಯವೇ ಅಥವಾ ತಾಂತ್ರಿಕದೋಷದಿoದ ಬೆಂಕಿ ಕಾಣಿಸಿಕೊಂಡಿತೇ ಎನ್ನುವುದು ತನಿಖೆಯಿಂದ ತಿಳಿದುಬರಬೇಕಿದೆ.
ಕಾರವಾರದ ಮಾಜಾಳಿಯ ಗಾಂವಗೇರಿಯಲ್ಲಿ ಈ ಘಟನೆ ನೆಡೆದಿದ್ದು, ಬೈಕಿನ ಬಹುತೇಕ ಭಾಗಗಳು ಸುಟ್ಟು ಕರಕಲಾಗಿದೆ. ಕಾರವಾರದ ನಂದನ್ ರಮಾಕಾಂತ್ ನಾಯ್ಕ ಎನ್ನುವವರಿಗೆ ಸೇರಿದ ಬೈಕ್ ಇದು ಎನ್ನಲಾಗಿದೆ. ಚಿತ್ತಾಕುಲ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್, ಕಾರವಾರ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಶಿರಸಿಯಲ್ಲಿ ಆರು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ
- ಪಕ್ಷದಲ್ಲಿ ಇರಲು ಇಷ್ಟವಿಲ್ಲವಾದರೆ ರಾಜೀನಾಮೆ ನೀಡಿ: ಶಾಸಕ ಶಿವರಾಮ ಹೆಬ್ಬಾರ್ ಗೆ ಸುನೀಲ್ ಕುಮಾರ ತಿರುಗೇಟು
- ಖಾಸಗಿ ಬಸ್ ಪಲ್ಟಿ: ಇಬ್ಬರ ಸಾವು, ಹಲವರಿಗೆ ಗಂಭೀರ ಗಾಯ
- ಆಡಳಿತ ವ್ಯವಸ್ಥೆಯಿಂದ ಸರ್ವಾಧಿಕಾರ ಆರೋಪ: ಮತದಾನ ಬಹಿಷ್ಕರಿಸಿದ ನಾಗರಿಕರು: ಸಚಿವ ಮಂಕಾಳ್ ವೈದ್ಯರ ವಿರುದ್ಧ ಪರೋಕ್ಷವಾಗಿ ಅಸಮಾಧಾನ
- ತ್ರಿವಿಕ್ರಮ ಸಾಧಕನಿಂದ ಅಂಕೋಲಾದಲ್ಲಿ ಭರ್ಜರಿ ಪ್ರಚಾರ : ಮೀನು ಪೇಟೆ ಬಳಿಯೂ ಮತಭೇಟೆಗೆ ಮುಂದಾದ ಕಾಗೇರಿ