ಮರಕ್ಕೆ ಡಿಕ್ಕಿ ಹೊಡೆದ ಲಾರಿ: ತಾಸಿಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಲಾರಿಯಲ್ಲಿ ಸಿಲುಕಿದ್ದ ಚಾಲಕನ ಜೀವರಕ್ಷಣೆ

ಲಾರಿ ಮರಕ್ಕೆ ಜೋರಾಗಿ ಗುದ್ದಿದ ಪರಿಣಾಮ ಲಾರಿಯ ಮುಂಭಾಗ ಸಂಪೂರ್ಣ ನುಜ್ಜು ಗೊಂಡು, ಲಾರಿಯಲ್ಲಿ ಸಿಲುಕಿದ್ದ ಚಾಲಕನನ್ನು ಹೊರತೆಗೆಯಲು ತಾಸಿಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಬೇಕಾಯಿತು.

ಅಂಕೋಲಾ: ತಾಲೂಕಿನ ಮಾಸ್ತಿಕಟ್ಟಾ ಬಳಿ ರಾ. ಹೆ. 63ರಲ್ಲಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ, ರಸ್ತೆಯಂಚಿನ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಬುಧವಾರ ನಡೆದಿದೆ. ಮಂಗಳೂರಿನಿಂದ ಧಾರವಾಡಕ್ಕೆ ಕೋಕ್ ತುಂಬಿ ಹೊರಟಿದ್ದ ಲಾರಿ, ದಾರಿ ಮಧ್ಯೆ ಅಂಕೋಲಾ- ಹುಬ್ಬಳ್ಳಿ ಹೆದ್ದಾರಿಯಲ್ಲಿ ಅಪಘಾತಕ್ಕೆ ಈಡಾಗಿದೆ.ಲಾರಿ ಮರಕ್ಕೆ ಜೋರಾಗಿ ಗುದ್ದಿದ ಪರಿಣಾಮ ಲಾರಿಯ ಮುಂಭಾಗ ಸಂಪೂರ್ಣ ನುಜ್ಜು ಗೊಂಡು, ಲಾರಿಯಲ್ಲಿ ಸಿಲುಕಿದ್ದ ಚಾಲಕನನ್ನು ಹೊರತೆಗೆಯಲು ತಾಸಿಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಬೇಕಾಯಿತು.

ಕೋಕ್ ತುಂಬಿಕೊಂಡು ಮಂಗಳೂರಿನಿಂದ ವೇಲೂರಿನತ್ತ ಪ್ರಯಾಣ ಬೆಳೆಸಿದ್ದ ಲಾರಿ ಚಾಲಕ, ನಿದ್ರೆಯ ಗುಂಗಿನಲ್ಲಿದ್ದ ಎನ್ನಲಾಗಿದೆ. ನಿದ್ರೆಯ ಗುಂಗಿನಲ್ಲೇ ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ ಎಂಬ ಮಾಹಿತಿ ಲಭಿಸಿದೆ. ಅಪಘಾತದ ತೀವ್ರತೆಗೆ ಲಾರಿಯ ಮುಖ ಭಾಗ ಸಂಪೂರ್ಣ ಮರದೊಳಗೆ ಸೇರಿಕೊಂಡು, ಚಾಲಕ ಮತ್ತು ಕ್ಲೀನರ್ ಗಾಯಗೊಂಡಿದ್ದರು.

ಲಾರಿಯಿಂದ ಹೊರಬರಲಾರದ ಸ್ಥಿತಿಯಲ್ಲಿದ್ದ ಚಾಲಕ ವಿಜಯಪುರದ ಮುಬಾರ, ಕ್ಲೀನರ್ ಸಿಕಂದರ ಸಾವು ಬದುಕಿನ ಹೋರಾಟದಲ್ಲಿದ್ದರು. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ, ಕಾರ್ಯಾಚರಣೆ ನಡೆಸಿ, ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಚಾಲಕ ಮತ್ತು ಕ್ಲೀನರ್ ನ ಜೀವ ಉಳಿಸಿದರು. ಸ್ಥಳೀಯರು ಕೂಡಾ ಇವರ ಕಾರ್ಯಕ್ಕೆ ಕೈಜೋಡಿಸಿ ಮಾನವೀಯತೆ ಮೆರದರು.

ಚಾಲಕನ ಕಾಲಿಗೆ ಪೆಟ್ಟಾಗಿ ತೀವ್ರ ರಕ್ತ ಸ್ರಾವವಾಗಿದೆ. ಕ್ಲೀನರಗೂ ಚಿಕ್ಕಪುಟ್ಟ ಗಾಯಗಳಾಗಿದ್ದು ಇಬ್ಬರನ್ನೂ ತಾಲೂಕಾ ಸರ್ಕಾರಿ ಆಸ್ಪ್ರತ್ರೆಗೆ ದಾಖಲಿಸಲಾಗಿದೆ. ಪಿ. ಎಸ್ಸೆ ಈ ಸಿ ಸಂಪತ್ತ್ ಮತ್ತು ಪೊಲೀಸ್ ಸಿಬ್ಬಂದಿಗಳು ಸೇರಿ, ಅಗ್ನಿಶಾಮಕ ಹಾಗೂ ಅಂಬ್ಯುಲೆನ್ಸ ಸಿಬ್ಬಂದಿಗಳು ಹಾಗೂ ಸ್ಥಳೀಯರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

” ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9886460777

Exit mobile version