Follow Us On

WhatsApp Group
Important
Trending

ಮತ್ತೆ ಏಳು ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್: ಐವರು ಶಿಕ್ಷಕರಲ್ಲಿ ಸೋಂಕು: ಶಾಲೆ ಬಂದ್ ಮಾಡಿ ಆದೇಶ

ಅಂಕೋಲಾ: ಉತ್ತರಕನ್ನಡ ಜಿಲ್ಲೆಯ ಹಲವೆಡೆ ಶಾಲೆಗಳಲ್ಲಿ ಕರೊನಾ ಪ್ರಕರಣ ಹೆಚ್ಚುತ್ತಿರುವುದು ಆತಂಕಕಾರಿ ಬೆಳಗವಣಿಗೆಯಾಗಿದೆ. ಹೌದು, ಯಲ್ಲಾಪುರದ ಶಾಲೆಯೊಂದರಲ್ಲಿ 21 ವಿದ್ಯಾರ್ಥಿಗಳಿಗೆ ಮತ್ತು ಇಬ್ಬರು ಶಿಕ್ಷಕರಿಗೆ ಕೋವಿಡ್ ಪಾಸಿಟಿವ್ ಬಂದ ಬೆನ್ನಲ್ಲೆ, ಇದೀಗ ಅಂಕೋಲಾದಲ್ಲೂ ಇದೇ ತರಹದ ಪ್ರಕರಣ ವರದಿಯಾಗಿದೆ..

ಅಂಕೋಲ ತಾಲೂಕಿನ ಅಗಸೂರು (ಕೆ.ಪಿ.ಎಸ್) ಕರ್ನಾಟಕ ಪಬ್ಲಿಕ್ ಸ್ಕೂಲ್ ಏಳು ವಿದ್ಯಾರ್ಥಿಗಳು ,3 ಶಿಕ್ಷಕರಿಗೆ ಪಾಸಿಟಿವ್ ಬಂದಿದೆ. ಅಲ್ಲದೆ, ಬಾವಿಕೇರಿ 1, ಕೃಷ್ಣಾಪುರ 1 ಶಾಲೆ ಶಿಕ್ಷಕರಲ್ಲಿ ಕರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟು ವಿದ್ಯಾರ್ಥಿಗಳಿಗೆ ಹಾಗೂ ಒಟ್ಟು ಐವರು ಶಿಕ್ಷಕರಿಗೆ ಕರೊನಾ ಸೊಂಕು ತಗಲಿದೆ.

ಈ ಬೆಳವಣಿಗೆಯ ಬೆನ್ನಲ್ಲೆ, ಏಪ್ರಿಲ್ 1 ರ ವರೆಗೆ ಅಂಕೋಲದ ಅಗಸೂರು ಶಾಲೆ ಯನ್ನು ಬಂದ್ ಮಾಡಲಾಗಿದೆ ಎಂಬ ಮಾಹಿತಿ ಲಭಿಸಿದೆ.ಜೊತೆಗೆ 247 ಜನ ವಿದ್ಯಾರ್ಥಿಗಳು, 16 ಜನ ಶಿಕ್ಷಕರ ಗಂಟಲು ದ್ರವ ಪರೀಕ್ಷೆ ಗೆ ರವಾನೆ ಮಾಡಲಾಗಿದ್ದು ಫಲಿತಾಂಶ ಬರಬೇಕಿದೆ. ಶಾಲೆ, ಕಾಲೇಜಿನಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಬೆನ್ನಲ್ಲೆ, ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕಿದೆ.

ವಿಸ್ಮಯ ನ್ಯೂಸ್, ವಿಲಾಸ ನಾಯಕ ಅಂಕೋಲಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9886460777..

Back to top button