Follow Us On

WhatsApp Group
Important
Trending

ತಾಯಿ ಅಂಗಡಿಗೆ ತೆರಳಿದ್ದಳು | ಆಟವಾಡುತ್ತಿದ್ದ ಮಗು ನದಿ ತೀರದ ಗಜನಿ ಹೊಳೆಯಲ್ಲಿ ಬಿದ್ದು ಸಾವು

ಅಂಕೋಲಾ: ತಾಲೂಕಿನ ಅಗ್ರಗೋಣ ಶೇಡಿಕಟ್ಟಾ ವ್ಯಾಪ್ತಿಯ ಜುಗಾ ಗ್ರಾಮದ ಗಂಗಾವಳಿ ನದಿ ತೀರದಂಚಿನ ( ಗಜಿನಿ ಹೊಳೆ), ಮನೆಯ ಹತ್ತಿರ ಆಟವಾಡುತ್ತಿದ್ದ 5 ವರ್ಷ ದ ಪುಟಾಣಿ ಮಗುವೊಂದು ಆಟವಾಡುವ ಭರದಲ್ಲಿ ಮುಂದೆ ಮುಂದೆ ಹೋಗಿ ಆಕಸ್ಮಿಕವಾಗಿ ನೀರಿನಲ್ಲಿ ಜಾರಿಬಿದ್ದು ಅಸುನೀಗಿದ ಹೃದಯ ವಿದ್ರಾವಕ ಘಟನೆ ಮಾರ್ಚ್ 31ರಂದು ನಡೆದಿದೆ.

ಆರ್ಯನ್ ಚಂದ್ರಕಾಂತ್ ಹರಿಕಾಂತ ಮೃತ ದುರ್ದೈವಿಯಾಗಿದ್ದು, ತಾಯಿ ಮನೆ ಪಕ್ಕದ ಅಂಗಡಿಗೆ ಹೋಗಿ ಸಾಮಾನು ತರುವಷ್ಟರಲ್ಲಿ ಈ ದುರ್ಘಟನೆ ಸಂಭವಿಸಿದೆ. ಸ್ಥಳೀಯರ ಸಹಕಾರದಲ್ಲಿ ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸುವಷ್ಟರಲ್ಲಿ ಮಗುವಿನ ಪ್ರಾಣ ಪಕ್ಷಿ ಹಾರಿಹೋಗಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ಮನೆ ಮಾಡಿದೆ. ಅಂಕೋಲಾ ಪಿಎಸ್ಐ ಈ ಸಿ ಸಂಪತ್ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಪುಕರಣ ದಾಖಲಿಸಿಕೊಂಡಿದ್ದಾರೆ.

ಪುಟಾಣಿ ಕಂದಮ್ಮನ ಸಾವಿಗೆ ಕಂಬನಿ ಮಿಡಿದಿರುವ ಶಾಸಕಿ ರೂಪಾಲಿ ನಾಯ್ಕ ತೀವ್ರ ಸಂತಾಪ ವ್ಯಕ್ತಪಡಿಸಿ, ಶ್ರೀದೇವರು ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿ, ನೊಂದ ಕುಟುಂಬಕ್ಕೆ ವೈಯಕ್ತಿಕವಾಗಿ ಹಾಗೂ ಸರ್ಕಾರದಿಂದ ಸಾಧ್ಯವಾಗುವ ಎಲ್ಲಾ ನೆರವು ನೀಡುವುದಾಗಿ ತಿಳಿಸಿದ್ದಾರೆ. ಮೀನುಗಾರ ಮುಖಂಡ ಗಣಪತಿ ಉಳ್ವೇಕರ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

Back to top button