Follow Us On

WhatsApp Group
Important
Trending

ಕಾಡುಪ್ರಾಣಿ ಬೇಟೆಗೆ ಇಟ್ಟಿದ್ದ ಕೈಬಾಂಬ್ ಸ್ಪೋಟ: ಛಿದ್ರಗೊಂಡ ಆಕಳ ಬಾಯಿ ; ಮಹಿಳೆಯರು ಪ್ರಾಣಾಪಾಯದಿಂದ ಪಾರು

ಮುಂಡಗೋಡ: ಕಾಡುಪ್ರಾಣಿ ಬೇಟೆಗೆ ಇಟ್ಟಿದ್ದ ಕೈಬಾಂಬ್ ಸ್ಫೋಟಗೊಂಡು ಆಕಳಿನ ಬಾಯಿ ಛಿದ್ರಗೊಂಡಿರುವ ಘಟನೆ ಮುಂಡಗೋಡ ತಾಲೂಕಿನ ಸನವಳ್ಳಿ ಜಲಾಶಯದ ಬಳಿ ನಡೆದಿದೆ. ಆಕಳು ಜಲಾಶಯದ ಹತ್ತಿರ ಮೇಯುತ್ತಿದ್ದಾಗ ನೆಲದಲ್ಲಿ ಬಿದ್ದಿದ್ದ ಕೈಬಾಂಬ್‌ನ್ನು ಆಹಾರವೆಂದು ತಿನ್ನಲು ಮುಂದಾಗಿದ್ದು ಈ ವೇಳೆ ಕೈಬಾಂಬ್ ಸ್ಫೋಟಗೊಂಡಿದೆ. ಪರಿಣಾಮ ಆಕಳಿನ ಬಾಯಿ ಸಂಪೂರ್ಣ ಛಿದ್ರಗೊಂಡಿದ್ದು ಮುಖ ಪ್ರಾಣಿಯ ವೇದನೇ ನೋಡಲಾಗದ ಸ್ಥಿತಿಗೆ ತಲುಪಿದೆ.

ಕಾಡು ಪ್ರಾಣಿ ಬೇಟೆಗಾಗಿ ಈ ರೀತಿ ಬಾಂಬ್ ತಯಾರಿಸಿ ಇಡಲಾಗುತ್ತದೆ. ಜಲಾಶಯದ ನೀರು ಕುಡಿಯಲು ಬರೋ ಕಾಡು ಪ್ರಾಣಿಗಳು ಆಹಾರದ ರೀತಿ ಇರುವ ಕೈಬಾಂಬ್ ತಿನ್ನಲು ಮುಂದಾದಾಗ ಇಲ್ಲವೆ ತುಳಿದರೆ ಬಾಂಬ್ ಸ್ಪೋಟಗೊಳ್ಳುತ್ತದೆ. ಇದೇ ರೀತಿ ಆಕಳು ತಿನ್ನಲು ಮುಂದಾದಾಗ ಸ್ಪೋಟಗೊಂಡಿದ್ದು, ಬಾಯಿ ನಾಲಗೆ ಕಳೆದುಕೊಂಡು ಆಕಳು ನರಕಯಾತನೆ ಅನುಭವಿಸುವಂತಾಗಿದೆ. ದುರದೃಷ್ಟವಶಾತ್ ದುರ್ಘಟನೆಯಿಂದ ಸ್ವಲ್ಪದರಲ್ಲೇ ಕಟ್ಟಿಗೆಗೆ ತೆರಳಿದ ಮಹಿಳೆಯರು ಪಾರಾಗಿದ್ದಾರೆ.

ಘಟನೆ ಬಳಿಕ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮತ್ತೊಂದು ಜೀವಂತ ಕೈಬಾಂಬ್ ಪತ್ತೆ ಮಾಡಿದ್ದಾರೆ. ಇಂತಹ ದುಷ್ಕೃತ್ಯದಲ್ಲಿ ತೊಡಗುವ ಬೇಟೆಗಾರರ ಮೇಲೆ ನಿಗಾ ಇಡುವಂತೆ ಮತ್ತು ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಬಂಧಿಸುವoತೆ ಸ್ಥಳೀಯರು ಆಗ್ರಹಿಸಿದ್ದಾರೆ. ಈ ಬಗ್ಗೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button