Big News
Trending

ಲಸಿಕೆ ಪಡೆದ 24 ವಿದ್ಯಾರ್ಥಿಗಳಲ್ಲಿ ಸೋಂಕು: ಆದರೆ, ಈ ವಿಷಯ ಗಮನಿಸಿ: ಲಸಿಕೆ ಪಡೆದವರು & ಪಡೆಯದವರ ಆರೋಗ್ಯ ಸ್ಥಿತಿ ಹೇಗಿದೆ?

ಕರೊನಾ ಲಸಿಕೆ ತೆಗೆದುಕೊಂಡರೆ ಹಾಗೆ ಆಗುತ್ತಂತೆ!, ಹೀಗೆ ಆಗುತ್ತಂತೆ.. ಅವರಿಗೆ ಹೀಗಾಗಿದೆ, ಅಲ್ಲಿ ಹೀಗಾಗಿದೆಯಂತೆ.. ಇಂಥ ಗಾಳಿ ಸುದ್ದಿಯನ್ನು ನಂಬಬೇಡಿ. ಕರೊನಾ ಲಸಿಕೆ ಅತ್ಯಂತ ಪರಿಣಾಮಕಾರಿ ಅಂತ ವೈದ್ಯರು, ವಿಜ್ಞಾನಿಗಳು ಹೇಳುತ್ತಲೇ ಬಂದಿದ್ದಾರೆ. ಈ ಸ್ಟೋರಿಯನ್ನು ಒಮ್ಮೆ ಓದಿ ನೋಡಿ.

ಕಾರವಾರ: ಕರೊನಾ 2 ನೇ ಅಲೇಯ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ವಿದ್ಯಾರ್ಥಿಗಳು ಸಹ ಹೆಚ್ಚಿನ ಸಂಖ್ಯೆಯಲ್ಲಿ ಈ ಒಂದು ಕರೋನಾ ಸೋಂಕಿಗೀಡಾಗುತ್ತಿರುವುದು ಆತಂಕದ ವಿಷಯವಾಗಿದೆ.

ಇದೀಗ ಕಾರವಾರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ 27 ವಿದ್ಯಾರ್ಥಿಗಳಿಗೆ ಕರೊನಾ ಸೊಂಕು ದೃಢಪಟ್ಟಿದೆ. ಆದರೆ, ಇವರಲ್ಲಿ 24 ಮಂದಿ ಮೊದಲ ಹಂತದ ಕರೊನಾ ಲಸಿಕೆಯನ್ನು ಪಡೆದುಕೊಂಡವರು. ಹೀಗಾಗಿ ಈ ಕಾರಣದಿಂದಾಗಿ ಇವರಲ್ಲಿ ಸೋಂಕಿನ ಪ್ರಮಾಣ ಅತಿ ಕಡಿಮೆ ಇದೆ ಎನ್ನಲಾಗಿದೆ.

ಕರೊನಾ ಲಸಿಕೆ ಪಡೆಯವ ಮೂವರದಲ್ಲಿ ಅತಿಹೆಚ್ಚು ಪ್ರಮಾಣದಲ್ಲಿ ಸೋಂಕು ಕಾಣಿಸಿಕೊಂಡಿದೆ. ಆದರೆ, ಕೇವಲ ಮೊದಲ ಡೋಸಿನ ಲಸಿಕೆ ಪಡೆದ 24 ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ಬಂದರೂ, ಆರೋಗ್ಯ ಸ್ಥಿತಿ ಸಹಜವಾಗಿಯೇ ಇದೆ. ಯಾವುದೇ ಅಡ್ಡಪರಿಣಾಮಗಳಾಗಿಲ್ಲ. ಯಾವುದೇ ಆರೋಗ್ಯ ಸಮಸ್ಯೆಯೂ ಅವರನ್ನು ಕಾಡುತ್ತಿಲ್ಲ. ಸಂಪೂರ್ಣ ಆರೋಗ್ಯವಾಗಿದ್ದಾರೆ. ಹೀಗಾಗಿ ಲಸಿಕೆ ಸಂಪೂರ್ಣ ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.

27 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ನೆಗೆಟಿವ್ ಬಂದ ವಿದ್ಯಾರ್ಥಿಗಳಿಗೆ ಸದ್ಯ ಕಾಲೇಜಿಗೆ ರಜೆ ನೀಡಿ ಅವರವರ ಊರಿಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಮುಂದೆ ಶಾಲಾ ಶಿಕ್ಷಕರಿಗೆ ಕರೋನಾ ಲಸಿಕೆ ನೀಡಲು ಹೆಚ್ಚಿನ ಒತ್ತು ನೀಡುತ್ತೇನೆ

ಶಾಲೆಗಳಲ್ಲಿ ಸೋಂಕಿನ ಲಕ್ಷಣ ಇದ್ದವರಿಗೆ ತಪಾಸಣೆ ಸೇರಿದಂತೆ ಎಲ್ಲಾ ರೀತಿಯ ಮುಂಜಾಗೃತ ಕ್ರಮ ಕೈಗೊಳ್ಳಲಾಗುವುದು. ವಸತಿ ನಿಲಯಗಳಲ್ಲಿ ನಿಗದಿತ ದಿನದಂದು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಕಳೆದ ಒಂದು ವಾರದ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಒಟ್ಟು 21 ವಿಧ್ಯಾರ್ಥಿಗಳಲ್ಲಿ ಹಾಗೂ ಅಂಕೋಲಾ ತಾಲೂಕಿನ 7 ವಿದ್ಯಾರ್ಥಿಗಳಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿತ್ತು. ಅಂತೆಯೇ ಇದೀಗ ಕಾರವಾರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ 27 ವಿದ್ಯಾರ್ಥಿಗಳಿಗೆ ಕರೋನಾ ಸೊಂಕು ದೃಢಪಟ್ಟಿದೆ. ಸುಳ್ಳು ವದಂತಿಗಳಿಗೆ ಕಿವಿಗೊಡದೆ ಎಲ್ಲರೂ ಲಸಿಕೆ ಹಾಕಿಸಿಕೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ಬ್ಯುರೋ ರಿಪೋರ್ಟ್, ವಿಸ್ಮಯ ನ್ಯೂಸ್.

Back to top button