Follow Us On

WhatsApp Group
Important
Trending

ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ತಪ್ಪಿತು ನಿಯಂತ್ರಣ: ಬೈಕ್ ನಿಂದ ಬಿದ್ದು ಯುವಕ ಸಾವು

ಭಟ್ಕಳ: ನಾಯಿ ತಪ್ಪಿಸಲು ಹೋಗಿ ಬೈಕ್ ನಿಯಂತ್ರಿಸಲಾಗದೆ ಬೈಕನಿಂದ ಬಿದ್ದು ಯುವಕನೊರ್ವ ಸಾವನ್ನಪಿರುವ ಘಟನೆ ಭಟ್ಕಳ ತಾಲೂಕಿನ ಬಸ್ತಿಯಲ್ಲಿ ನಡೆದಿದೆ ಮೃತ ಯುವಕ ಮಂಜುನಾಥ ಶನಿಯಾರ ನಾಯ್ಕ (28) ಬಿದ್ರಮನೆ ಕಾಯ್ಕಿಣಿ ನಿವಾಸಿ ಎಂದು ತಿಳಿದು ಬಂದಿದೆ. ಈತ ಗುರುವಾರ ರಾತ್ರಿ 7 ಗಂಟೆಗೆ ಪಲ್ಸರ್ ಬೈಕ್ ನಲ್ಲಿ ಬಸ್ತಿಕಡೆಯಿಂದ ತನ್ನ ಮನೆಯಾದ ಬಿದ್ರಮನೆ ಕಡೆಗೆ ಸಿಮೆಂಟ್ ರಸ್ತೆ ಮೇಲೆ ಅತಿ ವೇಗದಿಂದ ಬೈಕ್ ಚಲಾಯಿಸಿಕೊಂಡು ಬಂದಿದ್ದ ಎನ್ನಲಾಗಿದ್ದು, ಈ ವೇಳೆ ಒಮ್ಮೆಲೇ ನಾಯಿ ಅಡ್ಡ ಬಂದಿರುವುದರಿoದ ನಾಯಿ ತಪಿಸಲು ಹೋಗಿ ಬೈಕ್ ನಿಯಂತ್ರಿಸಲಾಗದೆ ಬೈಕ್ ನಿಂದ ಕೆಳಗೆ ಬಿದ್ದಿದ್ದಾನೆ.

ಸಿಮೆಂಟ್ ರಸ್ತೆಯಲ್ಲಿ ಬಿದ್ದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ. ಗಾಯಗೊಂಡಿದ್ದ ಯುವಕನನ್ನು ತಕ್ಷಣ ಸಾರ್ವಜನಿಕರು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಮಾರ್ಗ ಮದ್ಯೆ ಸಾವನ್ನಪ್ಪಿದ್ದಾನೆ . ಈ ಕುರಿತು ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888…

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Back to top button