ಶಾಲಾ ಬಾಲಕಿಯನ್ನು ಪುಸಲಾಯಿಸಿ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದ ಆರೋಪಿಯನ್ನು 48 ಗಂಟೆಯೊಳಗೆ ಬಂಧಿಸಿದ ಪೊಲೀಸರು

ಭಟ್ಕಳ: ಶಾಲಾ ಬಾಲಕಿಯೋರ್ವಳನ್ನು ಪುಸಲಾಯಿಸಿ, ಆಕೆಯನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿ ಲೈಂಗಿಕ ಸಂಪರ್ಕ ಬೆಳೆಸಿದ ಆರೋಪದ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ತಾಲೂಕಿನ ಚಿತ್ರಾಪುರ ಬಡ್ಡುಕುಳಿ ನಿವಾಸಿ ಅಕ್ಷಯ ಮಂಜುನಾಥ ನಾಯ್ಕ (23) ಎಂದು ಗುರುತಿಸಲಾಗಿದೆ.

ಶಾಲಾ ಬಾಲಕಿ ನಾಪತ್ತೆಯಾದ ಬಗ್ಗೆ ದೂರನ್ನು ಸ್ವೀಕರಿಸಿದ್ದ ಪೊಲೀಸರು, 48 ಗಂಟೆಗಳ ಒಳಗಾಗಿ ಬಾಲಕಿಯನ್ನು ಬೆಂಗಳೂರಿನಲ್ಲಿ ಪತ್ತೆ ಹಚ್ಚಿ ಕರೆ ತಂದಿದ್ದರು. ಇದೀಗ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಬಾಲಕಿಯೊಂದಿಗೆ ಸಂಪರ್ಕ ಬೆಳೆಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಭಟ್ಕಳ ಗ್ರಾಮೀಣ ಠಾಣಾ ಎಸೈ ಎಸೈ ಭರತ್ ತನಿಖೆ ಕೈಗೊಂಡಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Exit mobile version