Follow Us On

WhatsApp Group
Important
Trending

ಕಾರು, ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಓರ್ವ ಸಾವು: ಇಬ್ಬರಿಗೆ ಗಾಯ

ಅಂಕೋಲಾ: ಅಂಕೋಲಾ – ಹುಬ್ಬಳ್ಳಿ ಮಾರ್ಗ ಮಧ್ಯೆ ಕಳೆದ ಕೆಲ ದಿನಗಳಿಂದ ರಸ್ತೆ ಅಪಘಾತಗಳು ಹೆಚ್ಚುತ್ತಿದ್ದು, ಹಲವು ಸಾವು ನೋವಿನ ಪ್ರಕರಣ ದಾಖಲಾಗಿದೆ. ಯುಗಾದಿ ಹಬ್ಬದ ದಿನ ನಡೆದ ಕಾರ್ ಮತ್ತು ಲಾರಿ ಅಪಘಾತದಲ್ಲಿ ಅವರ್ಸಾದ ಓರ್ವ ಯುವಕ ಮತ್ತು ಆತನ ಅಕ್ಕನ ಮಗಳು 7 ವರ್ಷದ ಪುಟಾಣಿ ಬಾಲೆ ಸ್ಥಳದಲ್ಲೇ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಮಾಸುವ ಮುನ್ನವೇ, ಅದೇ ಹೆದ್ದಾರಿಯ ಕಂಚಿನ ಬಾಗಿಲ ಬಳಿ ಬುಧವಾರ ಭೀಕರ ರಸ್ತೆ ಅಪಘಾತ ಸಂಭವಿಸಿ ಮತ್ತೊಂದು ಪ್ರಾಣಹಾನಿಯಾಗಿದೆ.

ಅಂಕೋಲಾ ಕಡೆಯಿಂದ ಯಲ್ಲಾಪುರ ಮಾಗ೯ವಾಗಿ ಹೊರಟಿದ್ದ ಲಾರಿ ಹಾಗೂ ಯಲ್ಲಾಪುರ ಕಡೆಯಿಂದ ಅಂಕೋಲಾ ಮಾರ್ಗವಾಗಿ ಬರುತ್ತಿದ್ದ ಕಾರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊರ್ವರು ಸ್ಥಳದಲ್ಲೇ ಮೃತಪಟ್ಟಿದ್ದು,, ಉಳಿದ ಈರ್ವರಿಗೆ ಗಾಯಗಳಾಗಿದೆ.

ಎಎಸ್ಪಿ ಬದ್ರಿನಾಥ, ಸಿಪಿಐ ಕೃಷ್ಯಾನಂದ ನಾಯಕ, ಪಿಎಸೈ ಇ.ಸಿ. ಸಂಪತ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಹಿಂದೆ ಹೈವೇ ಪೆಟ್ರೋಲ್ ಎಂದು ಕರೆಯಿಸಿ ಕೊಳ್ಳುತ್ತಿದ್ದ ಹೆದ್ದಾರಿ ಗಸ್ತು ವಾಹನದ ಸಿಬ್ಬಂದಿಗಳು, ಹೊಯ್ದಳ ಜೀವರಕ್ಷಕ ಪಡೆ ಯಾಗಿಯೂ ಕಾರ್ಯ ನಿರ್ವಹಿಸಲಾರಂಭಿಸಿದ್ದು , ಅಪಘಾತದ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿ ಕರ್ತವ್ಯ ನಿರ್ವಹಿಸಿದರು.

ಸಾಮಾಜಿಕ ಕಾರ್ಯಕರ್ತ ವಿಜಯ ಕುಮಾರ ನಾಯ್ಕ ಕನಸಿಗದ್ದೆ, ಸಹಾಯಕ ಬೊಮ್ಮಯ್ಯ ನಾಯ್ಕ, ಕಂಚಿನಬಾಗಿಲ ಮತ್ತು ಅಕ್ಕಪಕ್ಕದ ಗ್ರಾಮದ ಸ್ಥಳೀಯರು ಮಾನವೀಯ ನೆಲೆಯಲ್ಲಿ ಸಹಕರಿಸಿದರು.

ವಿಸ್ಮಯ ನ್ಯೂಸ್, ವಿಲಾಸ ನಾಯಕ ಅಂಕೋಲಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Back to top button