ಮದಿರೆ ಮತ್ತಿನಲ್ಲಿ ನಡುರಸ್ತೆಯಲ್ಲಿ ರಂಪಾಟ, ರದ್ಧಾಂತ; ವಶಕ್ಕೆ ಪಡೆದ ಪೊಲೀಸರು

ಕಾರವಾರ: ಕುಡಿದು ರಸ್ತೆಯಲ್ಲಿ ಸಾರ್ವಜನಿಕವಾಗಿ ದಾಂಧಲೆ ಮಾಡುತ್ತಿದ್ದ ವ್ಯಕ್ತಿಯೊಬ್ಬನಿಗೆ ಸ್ಥಳೀಯರು ಥಳಿಸಿ, ಪೊಲೀಸರಿಗೊಪ್ಪಿಸಿದ ಘಟನೆ ಕಾರವಾರದಲ್ಲಿ ಇತ್ತಿಚೆಗೆ ನಡೆದಿದೆ. ಕಾರವಾರದ ಮಾರುತಿಗಲ್ಲಿಯ ಬಳಿ ವ್ಯಕ್ತಿಯೊಬ್ಬ ಮದ್ಯ ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದರು.

ನಿಲ್ಲಲೂ ಕೂಡ ಆಗದಷ್ಟು ಕುಡಿದಿದ್ದ ಈತ, ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಹಾಗೂ ಸಾರ್ವಜನಿಕರ ಮೇಲೇ ಎರಗಲು ಮುಂದಾಗುತ್ತಿದ್ದ. ಈ ವೇಳೆ ಸ್ಥಳೀಯರು ಹಿಡಿಯಲು ಯತ್ನಿಸಿದರು ಕೆಲವರ ಮೇಲೆ ಹಲ್ಲೆಗೆ ಯತ್ನಿಸಿದ್ದ.

ಹೀಗಾಗಿ ಸ್ಥಳೀಯ ಕೆಲವರು ಹಿಗ್ಗಾಮುಗ್ಗ ಥಳಿಸಿ, ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರ ಮೇಲೂ ಎರಗಲು ಮುಂದಾಗುತ್ತಿದ್ದ. ಬಳಿಕ ಪೊಲೀಸರು 108 ಅಂಬ್ಯುಲೆನ್ಸ್ ಗೆ ಕರೆ ಮಾಡಿ ಕರೆಯಿಸಿಕೊಂಡು, ಹೆಡೆಮುರಿ ಕಟ್ಟಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿಕೊಟ್ಟರು.

ವ್ಯಕ್ತಿಯ ಗುರುತು ದೊರೆತಿಲ್ಲ. ಹಿಂದಿ ಮಾತನಾಡುತ್ತಿದ್ದ ಈತ ಅನ್ಯ ರಾಜ್ಯದವನಾಗಿ, ಕಾರವಾರದಲ್ಲಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಕಾರವಾರ

Exit mobile version