Follow Us On

WhatsApp Group
Important
Trending

ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ ಗಂಡ: ಕೊಲೆ ಮಾಡಿ ನಾಟಕವಾಡಲು ಹೋಗಿ ಪೊಲೀಸರಿಗೆ ಸಿಕ್ಕಿಬಿದ್ದ

ಕುಮಟಾ: ಪತಿಯೇ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕತಗಾಲ್‌ದ ಉಪ್ಪಿನಪಟ್ಟಣದಲ್ಲಿ ನಡೆದಿದೆ. ಉಪ್ಪಿನಪಟ್ಟಣದ ಮಮತಾ ಮಂಜುನಾಥ ಶಾನಭಾಗ ಎನ್ನುವರೇ ಕೊಲೆಯಾದ ಮಹಿಳೆಯಾಗಿದ್ದು, ಪತಿ ಮಂಜುನಾಥ ಶಾನಭಾಗ ಕೊಲೆಗೈದ ಆರೋಪಿಯಾಗಿದ್ದಾನೆ. ಯಾವುದೇ ಕಾರಣಕ್ಕೆ ಮಮತಾ ಹಾಗೂ ಮಂಜುನಾಥ ಇಬ್ಬರ ನಡುವೆ ಮಂಗಳವಾರ ರಾತ್ರಿ ಜಗಳ ನಡೆಸಿದೆ ಎನ್ನಲಾಗಿದ್ದು, ಇದೇ ಕೊಲೆಗೆ ಮೂಲ ಕಾರಣ ಎನ್ನಲಾಗಿದೆ..

ಜಗಳದ ವೇಳೆ ಮಂಜುನಾಥ ಪತ್ನಿಯನ್ನು ಕೈಯಿಂದ ಕುತ್ತಿಗೆ ಹಿಸುಕಿ ಕೊಂದ್ದಾರೆ. ಆದರೆ, ಕೊಲೆಯನ್ನು ಮುಚ್ಚಿಡಲು ಕುತ್ತಿಗೆಗೆ ಬಟ್ಟೆ ಸುತ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಸುದ್ದಿಯನ್ನು ಹಬ್ಬಿಸಿದ್ದಾನೆ. ©Copyright reserved by Vismaya tv ಅಲ್ಲದೆ, ತನ್ನ ಪತ್ನಿಯ ಮಾನಸಿಕ ಸ್ಥಿತಿ ಸರಿಯಿರಲಿಲ್ಲ ಹಿಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಮಟಾ ಪೊಲೀಸ್ ಠಾಣಗೆ ದೂರನ್ನು ಸಹ ನೀಡಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ತೆರಳಿದ ಕುಮಟಾ ಪೊಲೀಸರ ತಂಡ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ನಂತರ ಮಮತಾ ಶಾನಭಾಗ ಅವರ ಸಹೋದರನು ತನ್ನ ಭಾವನೆ ಸಹೋದರಿಯನ್ನು ಹತ್ಯೆಗೈದಿದ್ದಾನೆ ಎಂದು ದೂರು ನೀಡಿದ್ದು, ದೂರಿನ ಮೇರೆಗೆ ಮಂಜುನಾಥ ಶಾನಭಾಗ ಅವರನ್ನು ಕುಮಟಾ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ಪತ್ನಿಯನ್ನು ಕೊಲೆಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಈದಿಗ ಮಂಜುನಾಥ ಶಾನಭಾಗ ಅವರ ವಿರುದ್ಧ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಈ ಪ್ರಕರಣದ ಕುರಿತಾಗಿ ಮಾಹಿತಿ ಪಡೆದ ಭಟ್ಕಳ ಡಿವೈಎಸ್‌ಪಿ ಕೆ.ಎ ಬೆಳ್ಳಿಯಪ್ಪ ಅವರು ಕುಮಟಾ ಠಾಣೆಗೆ ಆಗಮಿಸಿ, ಸಿ.ಪಿ.ಐ. ಶಿವಪ್ರಕಾಶ ನಾಯ್ಕ, ಪಿ.ಎಸ್.ಐ ಆನಂದಮೂರ್ತಿ ಮುಂತಾದ ಪೊಲೀಸ್ ಅಧಿಕಾರಿಗಳಿಗೆ ಅಗತ್ಯ ಸಲಹೆ, ಸೂಚನೆ ನೀಡುವ ಮೂಲಕ ಪ್ರಕರಣದ ತನಿಖೆಗೆ ಸೂಕ್ತ ಮಾರ್ಗದರ್ಶನ ನೀಡಿದ್ದಾರೆ.

ವಿಸ್ಮಯ ನ್ಯೂಸ್, ಯೋಗೇಶ ಮಡಿವಾಳ. ಕುಮಟಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Back to top button