Focus News
Trending

ಹೆದ್ದಾರಿ ತಿರುವಿನಲ್ಲಿ ಕಲ್ಲಿದ್ದಲು ತುಂಬಿದ್ದ ಲಾರಿ ಪಲ್ಟಿ: ಕಂದಕ್ಕೆ ಬಿದ್ದು ಓರ್ವ ಸಾವು: ಇಬ್ಬರಿಗೆ ಗಂಭೀರ ಗಾಯ

ಹೊನ್ನಾವರ; ಚಾಲಕನ ಅತಿವೇಗ ಹಾಗೂ ನಿರ್ಲಕ್ಷ್ಯ ತನದ ಚಾಲನೇಯಿಂದ ಸರಕು ತುಂಬಿದ್ದ ಲಾರಿ ಪಲ್ಟಿಯಾಗಿ‌ ಲಾರಿಯಲ್ಲಿದ್ದ ಓರ್ವ ವ್ಯಕ್ತಿ ಮೃತಪಟ್ಟ ಘಟನೆ  ತಾಲೂಕಿನ ರಾಷ್ಟ್ರೀಯ ಹೆದ್ದಾರಿ 69ರ  ಗೇರುಸೊಪ್ಪಾ ಸುಳೆಮೂರ್ಕಿ ತಿರುವಿನಲ್ಲಿ ನಡೆದಿದೆ. ಈ ವೇಳೆ ಲಾರಿ ಕಂದಕಕ್ಕೆ ಉರುಳಿದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಕಲ್ಲಿದ್ದಲು ತುಂಬಿದ್ದ ಲಾರಿಯನ್ನು ಸಾಗರ ಮಾರ್ಗದಿಂದ ಹೊನ್ನಾವರ ಕಡೆಗೆ  ಚಲಾಯಿಸುತ್ತಿದ್ದರು. ಇದೇ ವೇಳೆ ಗೆರುಸೊಪ್ಪಾ ಸುಳೆಮೂರ್ಕಿ ಕ್ರಾಸ್ ನಲ್ಲಿ ಲಾರಿ ಪಲ್ಟಿಯಾಗಿದೆ‌.  ಈ ವೇಳೆ ಲಾರಿಯ ಚಾಲಕ ಹಾಗೂ ಕ್ಲೀನರ್ ಇರ್ವರಿಗೂ ಗಂಭೀರವಾದ ಗಾಯನೋವುಗಳಾಗಿದೆ.

ಆಂಬುಲೆನ್ಸ ಮೂಲಕ ಹೊನ್ನಾವರ ತಾಲೂಕಾಸ್ಪತ್ರೆಗೆ ದಾಖಲಿಸುವ ಮುನ್ನವೇ ಲಾರಿ ಕ್ಲಿನರ್ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸಾವಿಗಿಡಾದ ದುರ್ದೈವಿ ಕೊಪ್ಪಳ ಜಿಲ್ಲೆಯ 29ವರ್ಷದ ಮಾರುತಿ ಕೃಷ್ಣ ನಾಯ್ಕ ಎಂದು ಗುರುತಿಸಲಾಗಿದೆ.

ಗಂಭೀರ ಗಾಯಾಳುವಾದ ಲಾರಿ  ಚಾಲಕ ಬಳ್ಳಾರಿ ಜಿಲ್ಲೆಯ ಅಶೋಕ್ ಪೀರು ನಾಯಕ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ.

ಇನ್ನೂ ಆರೋಪಿತ ಚಾಲಕನ ವಿರುದ್ದ ಪರಶುರಾಮ ವಾಲ್ಯ ನಾಯಕ ಎನ್ನುವವರು ಹೊನ್ನಾವರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್ ಹೊನ್ನಾವರ

Back to top button