Follow Us On

WhatsApp Group
Big News
Trending

ಮೀನು ಹಿಡಿಯಲು ಹೋಗಿ ವಾಪಸ್ ಬರುತ್ತಿದ್ದ ವೇಳೆ ಹಿಂಬದಿಂದ ಬೈಕ್ ಗೆ ಡಿಕ್ಕಿ ಹೊಡೆದ ಕಾರು: ಬೈಕ್ ಸವಾರನ ಕೊಲೆ ಮಾಡಿ ಪರಾರಿ

ಮುಂಡಗೋಡ; ಆತ ಸ್ನೇಹತನ ಜೊತೆ ಸೇರಿ ಹಳ್ಳಕ್ಕೆ ಮೀನು ಹಿಡಿಯಲು ಹೋಗಿದ್ದ. ಈ ವೇಳೆ ಬೈಕ್ ನಲ್ಲಿ ಮರಳಿ ಬರುವಾಗ ಕಾರೊಂದು ಬೇಕಂತಲೇ ಬೈಕ್‍ಗೆ ಡಿಕ್ಕಿಹೊಡೆದಿದೆ. ಪರಿಣಾಮ ಬೈಕ್ ನಲ್ಲಿದ್ದರು ಕೆಳಗೆ ಬಿದ್ದಿದ್ದಾರೆ. ಈ ವೇಳೆ ಕಾರಿನಲ್ಲಿದ್ದವರು ಆತನನ್ನು ಕೊಲೆ ಮಾಡಿ ತೆರಳಿದ್ದಾರೆ. ಹೌದು, ಇದು ಯಾವುದೊ ಸಿನಿಮಾದ ಕಥೆಯಲ್ಲ. ಉತ್ತರಕನ್ನಡ ಜಿಲ್ಲೆಯ ಮುಂಡಗೋಡನಲ್ಲಿ ನಡೆದ ಘಟನೆ.

ಹೌದು, ಕಾರು ಡಿಕ್ಕಿಹೊಡೆದು ಬೈಕ್ ಸವಾರನನ್ನು ಬೀಳಿಸಿ, ಬಳಿಕ ಕೊಲೆ ಮಾಡಿದ ಘಟನೆ ತಾಲೂ ಬಡ್ಡಿಗೇರಿ ಸಮೀಪ ನಡೆದಿದೆ. ಈ ವೇಳೆ ಬೈಕ್‍ನಲ್ಲಿದ್ದ ಇನ್ನೊಬ್ಬ ಯುವಕ ತಪ್ಪಿಸಿಕೊಂಡು ಓಡಿಹೋಗಿ ಮನೆಯವರಿಗೆ ಮಾಹಿತಿ ನೀಡಿದ್ದಾನೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ಮೃತವ್ಯಕ್ತಿಯನ್ನು ಮುಂಡಗೋಡಿನ ಹರ್ಷಾ ಬೆಂದ್ರಾಳ ಎಂದು ಗುರುತಿಸಲಾಗಿದೆ. ಈತ ಮೂಲತ: ಧರ್ಮಸ್ಥಳದ ನಿವಾಸಿಯಾಗಿದ್ದು, ನಾಲ್ಕೈದು ವರ್ಷಗಳಿಂದ ಮುಂಡಗೋಡಿನಲ್ಲಿ ನೆಲೆಸಿದ್ದು, ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದ ಎನ್ನಲಾಗಿದೆ. ತನಿಖೆ ಆರಂಭಿಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ರಿಯಲ್ ಎಸ್ಟೇಟ್ ವಿಚಾರವಾಗಿ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದುಬರಬೇಕಿದೆ..

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button