ನೀರಿನ ವಿಷಯಕ್ಕೆ ಜಗಳ: ನೋಡನೋಡುತ್ತಲೇ ಎದೆಗೆ ಚಾಕುವಿನಿಂದ ಇರಿತ: ವ್ಯಕ್ತಿ ಸಾವು

ಹೊನ್ನಾವರ: ಒಂದು ಸಣ್ಣ ನೀರಿನ ವಿಷಯಕ್ಕೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು, ಕೊನೆಗೆ ಕೊಲೆ ನಡೆದ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಚಂದಾವರದಲ್ಲಿ ನಡೆದಿದೆ. ಹೌದು, ಮನೆಯ ನೀರಿನ ವಿಚಾರಕ್ಕಾಗಿ ಇಬ್ಬರ ನಡುವೆ ಜಗಳ ಆರಂಭವಾಗಿತ್ತು. ಅಕ್ಕಪಕ್ಕದಲ್ಲಿದ್ದವರು ಜಳಗ ಬಿಡಿಸುವ ಪ್ರಯತ್ನ ಮಾಡುತ್ತಲೇ ಇದ್ದರು. ಆದರೆ, ಪ್ರಯೋಜನವಾಗಲಿಲ್ಲ. ನೋಡನೋಡುತ್ತಲೇ, ಚಾಕುವಿನ ಇರಿದು ಅಬು ತಲೀಬ್ ಎಂಬಾತನ್ನು ಸಾಯಿಸಲಾಗಿದೆ.

ಕೊಲೆ ಮಾಡಿದ ವ್ಯಕ್ತಿಯನ್ನು ಸಲೀನ್ ಕೋಟೆಬಾಗಿಲ್ ಎಂದು ಗುರುತಿಸಲಾಗಿದೆ. ಅಕ್ಕಪಕ್ಕ ಜನರಿದ್ದಾಗಲೇ, ನೋಡ ನೋಡುತ್ತಲೇ ಜಗಳವಾಡುತ್ತಿದ್ದ ವ್ಯಕ್ತಿಯ ಎದೆಗೆ ಇನ್ನೊಬ್ಬ ವ್ಯಕ್ತಿ ಚಾಕುವಿನಿಂದ ಇರಿದಿದ್ದಾನೆ. ಹೊನ್ನಾವರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನು ತಿಳಿದುಬರಬೇಕಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಹೊನ್ನಾವರ

Exit mobile version