Follow Us On

WhatsApp Group
Important
Trending

ಮೀನುತುಂಬಿದ ಲಾರಿ ಪಲ್ಟಿ: ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯೆ ಚಾಲಕ ಸಾವು

ಕುಮಟಾ: ಲಾರಿಯೊಂದು ಪಲ್ಟಿಯಾದ ಪರಿಣಾಮ, ಲಾರಿ ಚಾಲಕ ಗಂಭೀರ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್‌ಗೆ ಸಾಗಿಸುತ್ತಿರುವಾಗ ಮಾರ್ಗಮಧ್ಯೆ ಮೃತಪಟ್ಟ ಘಟನೆ ಕುಮಟಾದ ದುಂಡಕುಳಿ ಸಮೀಪ ನಡೆದಿದೆ. ಗುಜರಾತ್‌ದಿಂದ ಕೆರಳಕ್ಕೆ ಸಾಗುತ್ತಿದ್ದ ಓಣಮೀನು ತುಂಬಿದ ಲಾರಿ ಬುಧವಾರ ರಾತ್ರಿಯ ವೇಳೆ ದುಂಡಕುಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಘಟನೆಯ ಪರಿಣಾಮ ಚಾಲಕನಿಗೆ ಗಂಭೀರ ಗಾಯವಾಗಿತ್ತು.

ತಕ್ಷಣ ಈತನನ್ನು ಕುಮಟಾ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್‌ಗೆ ದಾಖಲಿಸಬೇಕೆಂದು ವೈದ್ಯರು ಸೂಚಿಸಿದ ಕಾರಣ ಮಣಿಪಾಲ್‌ಗೆ ಸಾಗುತ್ತಿರುವ ವೇಳೆ ಚಾಲಕ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಲಾರಿಯಲ್ಲಿದ್ದ ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಒಂದು ಘಟನೆಗೆ ಚಾಲಕನ ಅಜಾಗರೂಕತೆಯೆ ಕಾರಣ ಎನ್ನಲಾಗಿದ್ದು, ಈ ಕುರಿತಾಗಿ ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಯೋಗೇಶ್ ಮಡಿವಾಳ ಕುಮಟಾ

Back to top button