Follow Us On

WhatsApp Group
Important
Trending

ಸೈರನ್ ಸದ್ದಿಗೂ ಬಂದಾಗದ ಅಂಗಡಿ; ಲಾಟಿ ಮೂಲಕ ಬಿಸಿ ಮುಟ್ಟಿಸಿದ ಪೊಲೀಸರು

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಕೊರೊನಾ ಕರ್ಪ್ಯೂ ಅವಧಿಯನ್ನು 10 ಗಂಟೆಗೆ ಸಿಮಿತಗೊಳಿಸಿದ್ದು, ಅವಧಿ ಮುಗಿದರು ಅಂಗಡಿ ಬಂದ್ ಮಾಡದ ವ್ಯಾಪಾರಿಗಳಿಗೆ ಅನಗತ್ಯವಾಗಿ ಓಡಾಡುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿರುವ ಘಟನೆ ಕಾರವಾರದಲ್ಲಿ ನಡೆದಿದೆ.

ನಗರದ ಗಾಂಧಿ ಬಜಾರ್, ಸವಿತಾ ಸರ್ಕಲ್, ಸೇರಿದಂತೆ ಇನ್ನಿತರ ಭಾಗದಲ್ಲಿ ಅವಧಿ ಮುಗಿದರೂ ಕಿರಾಣಿ ಅಂಗಡಿ, ಮೀನು ಸೇರಿದಂತೆ ಇನ್ನಿತರ ವ್ಯಾಪಾರ ಮಾಡತೊಡಗಿದ್ದರು. ಪೊಲೀಸ್ ಸೈರನ್ ಸದ್ದು ಕೇಳಿದರೂ ಬಂದ್ ಮಾಡದೇ ಉಡಾಫೆ ಪ್ರದರ್ಶಿಸುತ್ತಿದ್ದ ಅಂಗಡಿಕಾರರು ಹಾಗೂ ಮೀನುಗಾರ ಮಹಿಳೆಯರಿಗೆ ಎಚ್ಚರಿಸಿದ ಪೊಲೀಸರು ಲಾಟಿ ಬಿಸಿ ಅಂಗಡಿಗಳನ್ನು ಮುಚ್ಚಿಸಿದ್ದಾರೆ.

ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ 12 ಗಂಟೆವರೆಗೆ ಕಿರಾಣಿ ಅಂಗಡಿಗಳಲ್ಲಿ ಮಾರಾಟಕ್ಕೆ ಅನುಮತಿ ನೀಡಿದ್ದನ್ನೆ ದುರುಪಯೋಗ ಪಡೆಸಿಕೊಂಡು ಕೆಲವರು 12 ಗಂಟೆವರೆಗೂ ಅಡ್ಡಾಡತೊಎಗಿದ್ದರು. ಇದರಿಂದ ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳ ಸಲಹೆಯಂತೆ ಮತ್ತೆ 10 ಗಂಟೆವರೆಗೆ ಮಾತ್ರ ಮಾರಾಟಕ್ಕೆ ಅವಕಾಶ ನೀಡಲಾಗಿದೆ. 

ಅನಗತ್ಯವಾಗಿ ಓಡಾಡುವವರ ಮೇಲೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಿ ಜತೆಗೆ ವಾಹನಗಳನ್ನು ಸೀಜ್ ಮಾಡುತ್ತಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್ ಕಾರವಾರ

Back to top button