Follow Us On

WhatsApp Group
Focus News
Trending

ತೋಟಕ್ಕೆ ಹೋಗಿದ್ದ ವೇಳೆ ಅವಾಂತರ: ಕಾಲುಜಾರಿ ಬಾವಿಗೆ ಬಿದ್ದು ರೈತ ಸಾವು

ಕುಮಟಾ: ಕೃಷಿ ಕೆಲಸದಲ್ಲಿ ನಿರತನಾಗಿದ್ದ ರೈತನೊಬ್ಬ ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ಮೂರೂರಿನಲ್ಲಿ‌ ನಡೆದಿದೆ. ಮೃತಪಟ್ಟ‌ ರೈತನನ್ನು ನಾಗು ಜಟ್ಟು ಗೌಡ ಎಂದು ಗುರುತಿಸಲಾಗಿದೆ.

ಈತನು ಕೃಷಿ ಕೆಲಸಕ್ಕೆಂದು ತೋಟಕ್ಕೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿದ್ದಾನೆ. ತೋಟಕ್ಕೆ ಕೆಲಸಕ್ಕೆ ಹೋದ ವ್ಯಕ್ತಿ ರಾತ್ರಿಯಾದರೂ ಮನೆಗೆ ಬಾರದ ಹಿನ್ನಲೆಯಲ್ಲಿ ಮನೆಯರು ಹುಡುಕಾಟ ನಡೆಸಿದ್ದರು. ಆದರೆ ಪತ್ತೆಯಾಗಿರಲಿಲ್ಲ.

ತೋಟದಲ್ಲಿರುವ ಬಾವಿಯಲ್ಲಿ ಇಂದು ನಾಗುವಿನ ಮೃತ ದೇಹ ಪತ್ತೆಯಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಕುಮಟಾ ಪೊಲೀಸರು, ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ವಿಸ್ಮಯ ನ್ಯೂಸ್ ಕುಮಟಾ

Back to top button