Follow Us On

WhatsApp Group
Big News
Trending

ಐ.ಎಸ್.ಡಿ ಕರೆ ಪರಿವರ್ತನೆ ಜಾಲ ಪ್ರಕರಣ:ಭಟ್ಕಳದಲ್ಲಿ ಓರ್ವನ ಬಂಧನ: 32 ಸಿಮ್ ಕಾರ್ಡ್ ಬಳಸುವ ಬಾಕ್ಸ್ ಹೊಂದಿದ್ದ ಆರೋಪಿ

ಭಟ್ಕಳ: ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿ ಪರಿವರ್ತನೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಭಟ್ಕಳದಲ್ಲಿ ಬಂಧಿಸಿ, ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ.  ಭಟ್ಕಳ ತಾಲೂಕಿನ ನವಾಯತ್ ಕಾಲೋನಿಯ ತಕಿಯಾ ಸ್ಟ್ರೀಟ್ ನಿವಾಸಿ ನಿಸಾರ್ ಮಹಮ್ಮದ್ ಮುಕ್ತೇಸರ ಬಂಧಿತ ಆರೋಪಿಯಾಗಿದ್ದಾನೆ.

ಬೆಂಗಳೂರಿನ ಬಿಟಿಎಂ ಲೇಔಟ್​​​​​​​​​​ನಲ್ಲಿ ಜಾಲವೊಂದು ಅನಧಿಕೃತ ಟೆಲಿಫೋನ್ ಎಕ್ಸ್​​​ಚೇಂಜ್ ಮೂಲಕ ಐಎಸ್​​ಡಿ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಪರಿವರ್ತಿಸಿ, ದೂರಸಂಪರ್ಕ ಇಲಾಖೆಯು ವಂಚಿಸುತ್ತಿತ್ತು. ಈ ಸಂಬಂಧ ಇಬ್ರಾಹಿಂ ಮತ್ತು ಗೌತಮ್ ಎಂಬುವರನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಅವರ ಬಂಧನವಾಗುತ್ತಿದ್ದಂತೆ ನಿಸಾರ್ ಬೆಂಗಳೂರಿನಿಂದ ಭಟ್ಕಳಕ್ಕೆ ಬಂದಿದ್ದ. ಆರೋಪಿ ನಿಸಾರ್ ಒಂದೇ ಬಾರಿಗೆ 32 ಸಿಮ್ ಕಾರ್ಡ್​ಗಳನ್ನು ಬಳಸುವ ಸಿಮ್ ಬಾಕ್ಸ್ ಹೊಂದಿದ್ದ ಎಂದು ತಿಳಿದು ಬಂದಿದೆ.

ಪ್ರಕರಣಕ್ಕೆ ಸಂಬಂದಿಸಿದಂತೆ ಬೆಂಗಳೂರಿನಲ್ಲಾದ ಬೆಳವಣಿಗೆ: ಈ ಪ್ರಕರಣದಲ್ಲಿ ಬೆಂಗಳೂರಿನಲ್ಲಿ ಬಂಧಿತರಾಗಿರುವ ಇಬ್ರಾಹಿಂ ಹಾಗೂ ಗೌತಮ್ ಬಾಯ್ಬಿಟ್ಟ ಮಾಹಿತಿ ಆಧರಿಸಿ ಎಟಿಸಿ ತಮಿಳುನಾಡು‌ ಮೂಲದ ನಾಲ್ವರನ್ನು ವಶಕ್ಕೆ ಪಡೆದುಕೊಂಡು ಅವರನ್ನು ನಗರಕ್ಕೆ ಕರೆತಂದಿದ್ದಾರೆ.

ಇವರು ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿ ಮಾರ್ಪಡಿಸಲು ಬೇಕಾದ ಸಿಮ್ ಕಾರ್ಡ್‌ಗಳನ್ನು ತಮಿಳುನಾಡು, ಕೇರಳ ಸೇರಿದಂತೆ ವಿವಿಧ ರಾಜ್ಯಗಳಿಂದ ಪಡೆದು ಕೊರಿಯರ್ ಮುಖಾಂತರ ತಲುಪಿಸುತ್ತಿದ್ದರು ಎಂದು ತಿಳಿದುಬಂದಿದೆ‌. ಈ ರೀತಿ ಇದುವರೆಗೂ ಎಷ್ಟು ಸಿಮ್ ಕಾರ್ಡ್‌ಗಳನ್ನು ಪಡೆಯಲಾಗಿದೆ?, ಕೃತ್ಯದಲ್ಲಿ ಇನ್ನಿತರರ ಪಾತ್ರಗಳ ಬಗ್ಗೆ ಆರೋಪಿಗಳಿಂದ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಪಾಕ್ ನಿಂದಲು ಬರುತಿದ್ದ ಕರೆಗಳು:ಪಾಕಿಸ್ತಾನ, ಯುಎಇ ಸೇರಿದಂತೆ ವಿವಿಧ ದೇಶಗಳಿಂದ ಬರುವ ಕರೆಗಳನ್ನು ಸ್ಥಳೀಯ ಕರೆಗಳಾಗಿ ಮಾರ್ಪಾಡು ಮಾಡುವ ದಂಧೆಯಲ್ಲಿ ಆರೋಪಿಗಳು ತೊಡಗಿಸಿಕೊಂಡಿದ್ದು ಅಕ್ರಮವಾಗಿ ಹಣ ಸಂಪಾದನೆ ಮಾಡುತ್ತಿದ್ದರು‌‌.

ಪಾಕಿಸ್ತಾನ, ದುಬೈನಿಂದ ಭಾರತೀಯ ಸೇನಾಧಿಕಾರಿಗಳ ಕಚೇರಿಗಳಿಗೆ ತಾವು ನಿವೃತ್ತ ಮಿಲಿಟರಿ ಅಧಿಕಾರಿಗಳು ಪರಿಚಯಿಸಿಕೊಂಡು ಫೋನ್ ಮಾಡುತ್ತಿದ್ದ ಅಪರಿಚಿತರು ಕರ್ನಲ್ ಸೇರಿದಂತೆ ಕೆಲ ಪ್ರಮುಖ ಮಿಲಿಟರಿ ಅಧಿಕಾರಿಗಳ ವಿಳಾಸ ಕೇಳುತ್ತಿದ್ದರು. ಉಗ್ರಗಾಮಿಗಳ ಜೊತೆ ನೇರಾನೇರ ಸಂಪರ್ಕ ಹೊಂದಿದ್ದರಾ ಎಂಬುದರ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ‌.

15 ಸಿಮ್ ಬಾಕ್ಸ್ ಜಪ್ತಿ: ಈಗಾಗಲೇ ಆರೋಪಿಗಳಿಂದ 30 ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಅಳವಡಿಸಲಾಗಿದ್ದ, 960 ಸಿಮ್ ಕಾರ್ಡ್ ಗಳನ್ನು ಜಪ್ತಿ ಮಾಡಿಕೊಂಡಿದ್ದ ಎಟಿಸಿ ಅಧಿಕಾರಿಗಳು ಮತ್ತೆ ಬಿಟಿಎಂ ಲೇಔಟ್‌ನಲ್ಲಿದ್ದ ಇಬ್ರಾಹಿಂಗೆ ಸೇರಿದ ಜಾಗದಿಂದ ಇನ್ನೂ 15 ಸಿಮ್ ಬಾಕ್ಸ್‌ಗಳನ್ನು ವಶಪಡಿಸಿಕೊಂಡಿದ್ದಾರೆ‌ ಎಂಬ ಮಾಹಿತಿ ಲಭ್ಯವಾಗಿದೆ‌.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888…

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Back to top button