Follow Us On

WhatsApp Group
Important
Trending

ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದ ಲಾರಿ: ಇಬ್ಬರು ಸ್ಥಳದಲ್ಲೇ ಸಾವು: ನಾಲ್ವರಿಗೆ ಗಂಭೀರ ಗಾಯ: ಲಾರಿ ಚಾಲಕ ಪರಾರಿ

ಹಳಿಯಾಳ: ಕೃಷಿ ಚಟುವಟಿಕೆಗಳಿಗೆ ಸಂಬoಧಿಸಿದ ಸಾಮಾಗ್ರಿಗಳನ್ನು ಖರೀದಿಸಲೆಂದು ಹಳಿಯಾಳ ಗೂಡ್ಸ್ ವಾಹನದಲ್ಲಿ ಪಟ್ಟಣಕ್ಕೆ ಬರುತ್ತಿರುವ ಸಂದರ್ಭದಲ್ಲಿ ದುರಂತವೊoದು ಸಭವಿಸಿದೆ.

ಹೌದು, ಲಾರಿ ಚಾಲಕನ ಅಜಾಗರುಕತೆಯಿಂದ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಅಲ್ಲದೆ, ಹಲವರು ಗಾಯಗೊಂಡಿರುವ ಘಟನೆ ಬೆಳವಟಗಿ ಬಳಿ ನಡೆದಿದೆ.

ತಾಲೂಕಿನ ನಾಗಶೆಟ್ಟಿಕೊಪ್ಪ ಗ್ರಾಮದ ಬಳಿ ಲಾರಿಯೊಂದು ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಇಬ್ಬರು ಮೃತಪಟ್ಟಿದ್ದು , ಹಲವರು ಗಾಯಗೊಂಡಿದ್ದಾರೆ. ಬೆಳವಟಗಿ ಗ್ರಾಮದ ವೀರೇಶ್ ಮತ್ತು ಹನವ್ವ ಭಜಂತ್ರಿ ಮೃತಪಟ್ಟಿರುವ ದುರ್ದೈವಿ.

ಟಾಟಾ ಏಸ್ ಮೂಲಕ ವೀರೇಶ್, ಕೃಷಿ ಚಟುವಟಿಕೆಗಳಿಗೆ ಸಂಬoಧಿಸಿದ ಸಾಮಾಗ್ರಿಗಳನ್ನು ಖರೀದಿಸಲೆಂದು ಹಳಿಯಾಳ ಪಟ್ಟಣಕ್ಕೆ ಆಗಮಿಸುತ್ತಿದ್ದ. ಈ ಸಂದರ್ಭದಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ.

ಅಪಘಾತ ಸಂಭವಿಸುತ್ತಿದ್ದoತೆ ಲಾರಿ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ . ಈ ಕುರಿತು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ . ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಹಳಿಯಾಳ

Back to top button