Follow Us On

WhatsApp Group
Important
Trending

ಮಾವಿನ‌ ಮರದಿಂದ‌ ಹಣ್ಣು ಕೀಳುವಾಗ ಕಾಲುಜಾರಿ ಬಿದ್ದು ದುರಂತ: ಚಿಕಿತ್ಸೆ ಫಲಕಾರಿಯಾಗದೆ ಸಾವು

ಅಂಕೋಲಾ‌: ತಾಲೂಕಿನ ಬೆಳಂಬರ ಗ್ರಾಪಂ ವ್ಯಾಪ್ತಿಯ ಮೂಡ್ರಾಣಿ ನಿವಾಸಿ ಅಶೋಕ ಸೋಮು ಗೌಡ (42), ಮೃತಪಟ್ಟಿದ್ದಾನೆ. ಪಕ್ಕದ ತೆಂಕಣಕೇರಿಗೆ ಗ್ರಾಮದಲ್ಲಿ ಮಂಗಳವಾರ ಮಾವಿನ ಮರದಿಂದ ಫಸಲು ಕೀಳುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ಈತನನ್ನು. ಸ್ಥಳೀಯರ ಸಹಕಾರದಿಂದ ತಾಲೂಕಾಸ್ಪತ್ರೆಗೆ ಕರೆತಂದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಕಾರವಾರ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿತ್ತು.

ಗಂಭೀರ ಗಾಯಾಳುವಾಗಿದ್ದ ಆತನಿಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುತ್ತಿರುವ ವೇಳೆ ಮಾರ್ಗ ಮಧ್ಯೆ ಆತನ ಪ್ರಾಣ ಪಕ್ಷಿ ಹಾರಿ ಹೋಗಿದೆ. ಈ ಕುರಿತು ಪೋಲೀಸ್ ಪ್ರಕರಣ ದಾಖಲಾಗಿದೆ.

ಮೃತನಿಗೆ ಪತ್ನಿ ಇಬ್ಬರು ಮಕ್ಕಳಿದ್ದಾರೆ. ಕೃಷಿ ಕೂಲಿ ಮಾಡಿ ತನ್ನ ಕುಟುಂಬ ಜವಾಬ್ದಾರಿ ನಿರ್ವಹಿಸುತ್ತಿದ್ದ ಅಶೋಕ ಗೌಡನ ಅಕಾಲಿಕ ನಿಧನದಿಂದ ಪತ್ನಿ ಹಾಗೂ ಇಬ್ಬರು ಮಕ್ಕಳಲ್ಲಿ ಜೀವನ ಭದ್ರತೆ ಪ್ರಶ್ನೆ ಕಾಡುತ್ತಿದ್ದು, ನೊಂದ ಕುಟುಂಬಕ್ಕೆ ಸರ್ಕಾರ ಮತ್ತು ದಾನಿಗಳು ನೆರವಿನ ಹಸ್ತ ಚಾಚಬೇಕೆಂದು ಸ್ಥಳೀಯ ಯುವ ಪ್ರಮುಖ ಶೇಖರ ಗೌಡನ ಆಗ್ರಹಿಸಿದ್ದಾರೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ


ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Back to top button