ಅವೈಜ್ಞಾನಿಕ ಕಾಮಗಾರಿ ತಂದ ಅವಾಂತರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಕುಮಟಾ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರೊಂದು ಪಲ್ಟಿಯಾಗಿ ಹೆದ್ದಾರಿ ಪಕ್ಕದ ಮಣ್ಣಿನ ರಾಶಿ ಮೇಲೆ ಉರುಳಿಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರಿನಲ್ಲಿದ್ದ ಮೂವರಿಗೆ ಏನೂ ಆಗಿಲ್ಲವಾಗಿದ್ದು, ಬೇರೆ ಕಾರಿನ ವ್ಯವಸ್ಥೆ ಮಾಡಿಕೊಂಡು ಕಾರವಾರಕ್ಕೆ ಪ್ರಯಾಣ ಬೆಳೆಸಿದ್ದಾರೆ. ಮಾಹಿತಿ ಪಡೆದ ಕುಮಟಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

ತಾಲೂಕಿನ ಹೆದ್ದಾರಿ ತಂಡ್ರಕುಳಿ ಕ್ರಾಸ್ ಬಳಿ ಪದೇ ಪದೇ ಅಪಘಾತ ಸಂಭವಿಸುತ್ತಿರುವುದಕ್ಕೆ ಅವೈಜ್ಞಾನಿಕ ಕಾಮಗಾರಿ ಕಾರಣ ಎಂ ಆರೋಪ ಕೇಳಿಬಂದಿದೆ. ಇಲ್ಲಿ ಕೈಗೊಳ್ಳಲಾದ ಚತುಷ್ಪತ ಕಾಮಗಾರಿ ಅಸಮರ್ಪಕವಾಗಿದೆ. ಹೆದ್ದಾರಿಯ ಒಂದು ಕಡೆ ಮಣ್ಣು ತುಂಬಿ ರಾಶಿ ಹಾಕಿದರೆ ಇನ್ನೊಂದು ಕಡೆ ಹಾಗೆ ಬಿಟ್ಟಿದ್ದಾರೆ.

ಹೀಗಾಗಿ ಈ ವೇಗವಾಗಿ ಬಂದ ವಾಹನಗಳು ಒಮ್ಮೆಲೆ ನಿಯಂತ್ರಣ ತಪ್ಪುವ ಸಾಧ್ಯತೆ ಅಧಿಕವಾಗಿದೆ. ಈಗ ಸಂಭವಿಸಿದ ಅಪಘಾತ ಕೂಡಾ ಇದೇ ರೀತಿಯಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ವಿಸ್ಮಯ ನ್ಯೂಸ್, ಕುಮಟಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Exit mobile version