Follow Us On

WhatsApp Group
Important
Trending

ತೆಂಗಿನಮರವೇರಿ ಕಾಯಿ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ಶಾಕ್: ಮರದಿಂದ ಕೆಳಗೆ ಬಿದ್ದು ಕೃಷಿ ಕಾರ್ಮಿಕ ಸಾವು

ಭಟ್ಕಳ: ತೆಂಗಿನಮರವೇರಿ ಕಾಯಿ ಕೊಯ್ಯುತ್ತಿದ್ದ ಕೃಷಿ ಕೂಲಿ ಕಾರ್ಮಿಕನೊಬ್ಬನಿಗೆ ತೆಂಗಿನ ಗರಿಯು ವಿದ್ಯುತ್ ಲೈನ್ ತಗುಲಿದ ಪರಿಣಾಮ ಮರದಿಂದ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಜಾಲಿಯ ಸಮೀಪ ನಡೆದಿದೆ. ಮೃತ ಕೃಷಿಕ ರಾಮ ಸೋಮಯ್ಯ ಗೊಂಡ, ಜಾಲಿ ಪಟ್ಟಣದ ಹಾರುಮಕ್ಕಿ ನಿವಾಸಿ ಎಂದು ತಿಳಿದುಬಂದಿದೆ.

ಇವರು ತಗ್ಗರಗೋಡಿನಲ್ಲಿರುವ ಅಬ್ದುಲ್ ರಶೀದ್ ಬುಡ ಸಾಬ್ ಇವರ ಮನೆಯಲ್ಲಿ ಹಲವು ದಿನಗಳಿಂದ ಕೃಷಿ ಕೆಲಸ ಮಾಡಿಕೊಂಡಿದ್ದರು. ಅದರಂತೆ ಬೆಳಗ್ಗೆ 9 ಗಂಟೆಗೆ ಮನೆಗೆ ಕೃಷಿ ಕೆಲಸಕ್ಕೆ ಹೋಗಿದ್ದು, ಅವರ ತೋಟದಲ್ಲಿದ್ದ ತೆಂಗಿನಮರದ ಕಾಯಿ ಕೊಯ್ಯುತ್ತಿದ್ದ ಸಂದರ್ಭದಲ್ಲಿ ಸನಿಹದಲ್ಲೇ ಇದ್ದ ವಿದ್ಯುತ್ ಲೈನ್ ಗೆ ಆಕಸ್ಮಿಕವಾಗಿ ತೆಂಗಿನ ಗರಿಗೆತಾಗಿ ಶಾಕ್ ಹೊಡೆದಿದೆ.

ಶಾಕ್ ನಿಂದಾಗಿ ಅಸ್ವಸ್ಥಗೊಂಡ ಈತ ಮರದಿಂದ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಕುರಿತು ಈತನ ಸಹೋದರ ಮಾದೇವ ಸೋಮಯ್ಯ ಗೊಂಡ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Back to top button