ಉತ್ತರಕನ್ನಡದಲ್ಲಿ ವ್ಯಾಪಕ ಮಳೆ; ಕದ್ರಾ ಜಲಾಶಯದಿಂದ 26,916 ಕ್ಯೂಸೆಕ್ ನೀರು ಹೊರಕ್ಕೆ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಕಾರವಾರದ ಕದ್ರಾ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಇಂದು ಮೂರು ಗೇಟ್ ಗಳ ಮೂಲಕ ಒಟ್ಟು 26,916 ಕ್ಯೂಸೆಕ್ ನೀರನ್ನು ಕಾಳಿ ನದಿಗೆ ಬಿಡಲಾಗಿದೆ.

ಜಿಲ್ಲೆಯಾಧ್ಯಂತ ಕಳೆದ ಕೆಲ‌ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಅದರಲ್ಲಿಯೂ ಘಟ್ಟದ ಮೇಲ್ಬಾಗದ ತಾಲ್ಲೂಕುಗಳಲ್ಲಿ ಮಳೆ ವ್ಯಾಪಕವಾಗಿ ಸುರಿಯತೊಡಗಿದೆ. ಪರಿಣಾಮ ಕಾಳಿ ನದಿಗೆ ಯಥೇಚ್ಛವಾಗಿ ನೀರು ಹರಿದುಬರುತ್ತಿದ್ದು, ಕದ್ರಾ ಜಲಾಶಯಕ್ಕೆ 27,107 ಕ್ಯೂಸೆಕ್ಸ್ ನೀರಿನ ಒಳಹರಿವು ಇದೆ.

ಅಲ್ಲದೆ 34.50 ಮೀಟರ್ ಗರಿಷ್ಠ ಸಾಮರ್ಥ್ಯ ಹೊಂದಿರುವ ಕದ್ರಾ ಜಲಾಶಯದ ಮಟ್ಟ ಇಂದು ಮಧ್ಯಾಹ್ನದ ಹೊತ್ತಿಗೆ 31.50 ಮೀಟರ್ ತಲುಪಿದ ಹಿನ್ನೆಲೆಯಲ್ಲಿ ಜಲಾಶಯದ ಸುರಕ್ಷತೆ ಹಾಗೂ ಪ್ರವಾಹದ ಮುಂಜಾಗೃತಾ ಕ್ರಮವಾಗಿ ಜಲಾಶಯದಿಂದ 3 ಗೇಟ್‌ಗಳ ಮೂಲಕ  ಒಟ್ಟು 26,916 ಕ್ಯೂಸೆಕ್ಸ್ ನೀರನ್ನು ಹೊರ ಬಿಡಲಾಗಿದೆ.

ಅಲ್ಲದೆ ಕದ್ರಾ ಜಲಾಶಯ ಕಾಳಿ ನದಿಯ ಕೊನೆಯ ಜಲಾಶವಾಗಿದ್ದು, ಕಾಳಿ ನದಿಗೆ ಆರಂಭದಲ್ಲಿ ರಾಜ್ಯದ ಅತಿ ದೊಡ್ಡ ಸೂಪಾ ಜಲಾಶಯವಿದೆ. ಆದರೆ ಕಳೆದ ಬಾರಿ ವಿದ್ಯುತ್ ಉತ್ಪಾದನೆ ಕಡಿಮೆಯಾದ ಹಿನ್ನೆಲೆಯಲ್ಲಿ ಜತೆಗೆ ಈ ಭಾರಿ ಆರಂಭದಿಂದಲೂ ವ್ಯಾಪಕ ಮಳೆಯಾಗುತ್ತಿರುವುದರಿಂದ ಸೂಪಾ ಜಲಾಶಯ ಕೂಡ ಭರ್ತಿಯಾಗತೊಡಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜಲಾಶಯದಿಂದ ನೀರು ಹೊರಹಾಕಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್ ಕಾರವಾರ

Exit mobile version