ಕಲ್ಪನಾ ಮಹಾಲೆ ಕೊಲೆ ಪ್ರಕರಣ : ಜಿಲ್ಲಾ ನ್ಯಾಯಾಲಯದ ತೀರ್ಪು ಎತ್ತಿಹಿಡಿದ ಹೈಕೋರ್ಟ್

ಭಟ್ಕಳ: ತಾಲೂಕಿನ ಸಾಗರ ರಸ್ತೆಯ ಕೋಣಾರ ಗುಡ್ಡದ ನಿರ್ಜನ ಪ್ರದೇಶದಲ್ಲಿ 2012ರಲ್ಲಿ ನಡೆದಿದ್ದ ಕಲ್ಪನಾ ಮಹಾಲೆ ಕೊಲೆ ಪ್ರಕರಣ ಸಂಬoಧ ಜಿಲ್ಲಾ ನ್ಯಾಯಾಲಯ ಪ್ರಕಟಿಸಿದ್ದ ತೀರ್ಪನ್ನು ಧಾರವಾಡ ಹೈಕೋರ್ಟ್ ಎತ್ತಿಹಿಡಿದಿದೆ.

2012ರ ನವೆಂಬರ್ 4ರಂದು ಕಲ್ಪನಾ ಮಹಾಲೆ ಎನ್ನುವ ಮಹಿಳೆಯ ಕೊಲೆ ನಡೆದಿತ್ತು. ಪ್ರಕರಣದಲ್ಲಿ ತಾಲೂಕಿನ ಮುಂಡಳ್ಳಿಯ ಸದಾಶಿವ ನಾಯ್ಕ ಹಾಗೂ ನಾಗರಾಜ ನಾಯ್ಕ ಎನ್ನುವವರನ್ನ ಬಂಧಿಸಲಾಗಿತ್ತು. ವಿಚಾರಣೆ ನಡೆಸಿದ್ದ ಜಿಲ್ಲಾ ನ್ಯಾಯಾಧೀಶ ವಿ.ಎಸ್.ಧಾರವಾಡಕರ್ ಆರೋಪಿಗಳನ್ನ ದೋಷಮುಕ್ತ ಮಾಡಿ 2018ರ ಮಾರ್ಚ್ 26ರಂದು ಆದೇಶ ಹೊರಡಿಸಿದ್ದರು.

ಈ ಸಂಬoಧ ಸರ್ಕಾರ ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದು, ವಿಡಿಯೋ ಕಾನ್ಛರೆನ್ಸ್ ಮೂಲಕ ವಿಚಾರಣೆ ನಡೆಸಿದ ನ್ಯಾಯಾಧೀಶ ಜೆ.ಎಂ.ಖಾಜೀ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಜಾ ಮಾಡಿ, ಕಾರವಾರ ಸೆಷನ್ ನ್ಯಾಯಾಧೀಶರು ನೀಡಿದ್ದ ತೀರ್ಪನ್ನ ಎತ್ತಿ ಹಿಡಿದಿದೆ. ಆರೋಪಿಗಳ ಪರವಾಗಿ ಕುಂದಾಪುರದ ವಕೀಲ ರವಿಕಿರಣ ಮುರ್ಡೇಶ್ವರ ವಾದಿಸಿದ್ದರು.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Exit mobile version