Follow Us On

WhatsApp Group
Uttara Kannada
Trending

ತೆರೆದ ಬಾವಿಯಲ್ಲಿ ನೀರು ಸೇದಲು ಹೋಗಿ ಬಾವಿಗೆ ಬಿದ್ದ ವೃದ್ಧೆ; ಅಗ್ನಿಶಾಮಕ ಸಿಬ್ಬಂದಿಯ ಯಶಸ್ವಿ ಕಾರ್ಯಾಚರಣೆ

ಭಟ್ಕಳ: ತೆರೆದ ಬಾವಿಯಲ್ಲಿ ನೀರು ಸೇದಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ವೃದ್ಧೆಯೊಬ್ಬಳು ಬಾವಿಗೆ ಬಿದ್ದ ಘಟನೆ ಭಟ್ಕಳದಲ್ಲಿ ನಡೆದಿದೆ. ಬಾವಿಗೆ ಬಿದ್ದ ವೃದ್ಧೆಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣೆ ಮಾಡಿದ್ದಾರೆ. ಸೋಡಿಗದ್ದೆ ನಿವಾಸಿಯಾಗಿರುವ ನಾಗಮ್ಮ (60) ತನ್ನ ಮನೆಯ ತೆರೆದ ಬಾವಿಯಿಂದ ನೀರು ಸೇದವ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಾವಿಯಲ್ಲಿ ಬಿದ್ದಿದ್ದಾಳೆ.

ತಕ್ಷಣ ವಿಷಯ ತಿಳಿದ ಮನೆಯವರು ಅಗ್ನಿ ಶಾಮಕ ದಳ ಸಿಬ್ಬಂದಿಗೆ ಕರೆ ಮಾಡಿದ್ದು, ತಕ್ಷಣ ಕರೆಗೆ ಸ್ಪಂದಿಸಿ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಏಳು ಅಡಿ ವಿಸ್ತೀರ್ಣ 40 ಅಡಿ ಆಳದ ಬಾವಿಯಲ್ಲಿ ಬಿದ್ದ ವೃದ್ಧೆಯನ್ನು ರಕ್ಷಣೆ ಮಾಡಿ ಬಾವಿಯಿಂದ ಮೇಲಕ್ಕೆ ಎತ್ತಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ.

ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಎಸ್ ರಮೇಶ , ಮನೋಜ ಬಾಡಕರ್, ರಾಜೇಶ ನಾಯ್ಕ, ಕುಮಾರ ನಾಯ್ಕ, ಪುರುಷೋತ್ತಮ ನಾಯ್ಕ, ಅಕ್ಷಯ ಹಿರೇಮಠ, ಸುಧಾಕರ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button