ಕುಮಟಾ: ಕುಮಟಾ ತಾಲೂಕಾಡಳಿತ ಮತ್ತು ಪುರಸಭೆಯ ಸಾರ್ವಜನಿಕ ಪ್ರಕಟಣೆ, ಪಟ್ಟಣದ ನಾಗರೀಕ ಬಂಧುಗಳೇ, ಕರೋನಾ ಸಾಂಕ್ರಾಮಿಕ ರೋಗ ಹರಡದಂತೆ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕಾಗಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳ ಆದೇಶದಂತೆ ಔಷದಿ ಅಂಗಡಿ ಹೊರತುಪಡಿಸಿ ಬೆಳಿಗ್ಗೆ 7. ಗಂಟೆಯಿಂದ ಸಂಜೆ 6. ಗಂಟೆಯವರೆಗೆ ಮಾತ್ರ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಈ ಸಂದರ್ಭದಲ್ಲಿ ಅಂಗಡಿಕಾರರರಿಗೆ ಮತ್ತು ಸಾರ್ವಜನಿಕರಿಗೆ ಸಾಮಾಜಿಕ ಅಂತರವನ್ನು ಖಾಯ್ದುಕೊಳ್ಳುವಂತೆ ಹಾಗೂ ಮಾಸ್ಕ್ ಧರಿಸುವಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ತಪ್ಪಿದ್ದಲ್ಲಿ ದಂಡ ವಿಧಿಸಲಾಗುವುದು ಎಂದು ತಿಳಿಯಪಡಿಸಿದೆ. ಪಟ್ಟಣದ ಎಲ್ಲಾ ರೀತಿಯ ಅಂಗಡಿಕಾರರಿಗೆ ಉದ್ದಿಮೆ ಪರವಾನಿಗೆಯನ್ನು ಪುರಸಭೆಯಿಂದ ಪಡೆದುಕೊಳ್ಳುವುದನ್ನು ಕಡ್ಡಾಯಗೋಳಿಸಲಾಗಿರುತ್ತದೆ. ಸಂಜೆ 7. ಗಂಟೆ ನಂತರ ಬೆಳಿಗ್ಗೆ 7. ಗಂಟೆಯವರೆಗೆ ಸಾರ್ವಜನಿಕರು ವೈದ್ಯಕೀಯ ಕಾರಣ ಹೊರತುಪಡಿಸಿ ಪಟ್ಟಣದಲ್ಲಿ ಓಡಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಭಾನುವಾರ ಮಾತ್ರ ಔಷಧಿ ಅಂಗಡಿ ಹೊರತುಪಡಿಸಿ ಎಲ್ಲಾ ರೀತಿಯ ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣ ಬಂದ್ ಇಡುವಂತೆ ಆದೇಶಿಸಲಾಗಿದೆ. ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಯಾವುದೇ ಆದೇಶವನ್ನು ಉಲ್ಲಂಘಿಸಿದರೆ ಅಥವಾ ಸಹಕರಿಸದೇ ಇದ್ದಲ್ಲಿ ಅಂಗಡಿಗಳನ್ನು ಬಂದ್ ಮಾಡಲಾಗುವುದು ಹಾಗೂ ಇಂತಹವರ ವಿರುದ್ಧ ಕ್ರಮಕೈಗೊಳ್ಳಲಾಗುವುದೆಂದು ತಿಳಿಸಲಾಗಿದೆ. ಆದ್ದರಿಂದ ಸಾರ್ವಜನಿಕರು ಇದಕ್ಕೆ ಆಸ್ಪದ ಕೊಡದೇ ಕೊರೋನಾ ನಿಯಂತ್ರಿಸಲು ಸಹಕರಿಸುವಂತೆ ವಿನಂತಿಸಿದೆ.
Read Next
Important
Wednesday, May 7, 2025, 12:52 PM
ಅತ್ಯಂತ ಸುಸಜ್ಜಿತವಾದ ಮಳಿಗೆ ಮಾರಾಟಕ್ಕಿದೆ: ಕೂಡಲೇ ಸಂಪರ್ಕಿಸಿ
Important
Tuesday, May 6, 2025, 5:01 PM
ಮಿರ್ಜಾನಿನ ಆದಿಚುಂಚನಗಿರಿ ಇಂಡಿಪೆಂಡೆಂಟ್ ಪಿಯು ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಮೇ 10 ರಂದು ಪ್ರವೇಶ ದಾಖಲಾತಿ ಪರೀಕ್ಷೆ
Important
Tuesday, May 6, 2025, 11:49 AM
ಆಕ್ಸಿಸ್ ಬ್ಯಾಂಕ್ನಲ್ಲಿ ಬೆಂಕಿ ಅನಾಹುತ: ಅಪಾರ ಹಾನಿ
Friday, May 9, 2025, 10:51 AM
SSLC ಯಲ್ಲಿ ಸಾಧನೆ ಮಾಡಿದ ರೈತ ಕುಟುಂಬದ ಕನ್ನಡದ ಕುವರಿಗೆ ಇಂಜಿನೀಯರ್ ಆಗೋ ಕನಸು: ಹೆಸರಿಗೆ ತಕ್ಕಂತೆ ಇದೆ ಗ್ರಾಮೀಣ ಭಾಗದ ಆದರ್ಶ ಪ್ರೌಢಶಾಲೆ
Wednesday, May 7, 2025, 12:52 PM
ಅತ್ಯಂತ ಸುಸಜ್ಜಿತವಾದ ಮಳಿಗೆ ಮಾರಾಟಕ್ಕಿದೆ: ಕೂಡಲೇ ಸಂಪರ್ಕಿಸಿ
Tuesday, May 6, 2025, 5:01 PM
ಮಿರ್ಜಾನಿನ ಆದಿಚುಂಚನಗಿರಿ ಇಂಡಿಪೆಂಡೆಂಟ್ ಪಿಯು ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಮೇ 10 ರಂದು ಪ್ರವೇಶ ದಾಖಲಾತಿ ಪರೀಕ್ಷೆ
Tuesday, May 6, 2025, 11:49 AM
ಆಕ್ಸಿಸ್ ಬ್ಯಾಂಕ್ನಲ್ಲಿ ಬೆಂಕಿ ಅನಾಹುತ: ಅಪಾರ ಹಾನಿ
Related Articles

ಶಂಕರ ಜಯಂತಿ ಅರ್ಥಪೂರ್ಣವಾಗಿ ಆಚರಣೆ: ಶಾರದಾಂಬಾ ದೇವಸ್ಥಾನದಲ್ಲಿ ಕಾರ್ಯಕ್ರಮ ಆಯೋಜನೆ
Monday, May 5, 2025, 12:26 PM

ಗೋದಾವರಿ ಸಮೂಹ ಸಂಸ್ಥೆಗಳ ಅಧ್ಯಕ್ಷ ರಾಘವೇಂದ್ರ ಡಿ ನಾಯಕ ದೇವರಬಾವಿ ಅವರಿಗೆ ಸಂದ 2025ರ ಗ್ಲೋಬಲ್ ಅಚಿವರ್ಸ್ ಅವಾರ್ಡ್ : ರಷ್ಯಾ ದೇಶದಲ್ಲಿ ನಡೆದ ಭವ್ಯ ಸಮಾರಂಭ
Friday, May 2, 2025, 10:15 AM

ಉಪ ವಲಯ ಅರಣ್ಯ ಅಧಿಕಾರಿ ನವೀನ್ ಶೆಟ್ಟಿ ವಿಧಿವಶ: ಮುಖ್ಯಮಂತ್ರಿ ಬಂಗಾರದ ಪದಕ ಪುರಸ್ಕೃತರಾಗಿದ್ದ ಯುವ ಅಧಿಕಾರಿ ಇನ್ನು ನೆನಪು ಮಾತ್ರ
Wednesday, April 30, 2025, 12:21 PM

ಹಾಲಕ್ಕಿ ನೌಕರರ ಸಂಘಟನೆ ಸಮಾಜಕ್ಕೆ ದಿಕ್ಸೂಚಿ – ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ
Monday, April 28, 2025, 4:09 PM
Check Also
Close - ಮಂಗನಕಾಯಿಲೆ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವುSaturday, April 26, 2025, 5:31 PM