Follow Us On

WhatsApp Group
Important
Trending

ಕೋವಿಡ್ ಲಸಿಕೆ ಪಡೆಯಲು ನೂಕುನುಗ್ಗಲು: ಬಾಗಿಲು ಬಂದ್ ಮಾಡಲು ಬಿಡದೆ ತಳ್ಳಾಟ : ಜನರನ್ನು ನಿಯಂತ್ರಿಸಲು ಪೊಲೀಸರು, ಸಿಬ್ಬಂದಿಯ ಹರಸಾಹಸ

ಕಾರವಾರ: ಕೋವಿಡ್ ಲಸಿಕೆ ಪಡೆಯಲು ಬೆಳಿಗ್ಗೆಯಿಂದಲೇ ಕಾದು ಕುಳಿತಿದ್ದ ಜನರಿಗೆ ಲಸಿಕೆ ಖಾಲಿಯಾದ ಸುದ್ದಿ ಹಬ್ಬುತ್ತಿದ್ದಂತೆ ಲಸಿಕೆ ಪಡೆಯಲು ನೂರಾರು ಜನರು ಆಸ್ಪತ್ರೆಗೆ ನುಗ್ಗಲು ಯತ್ನಿಸಿದ ಘಟನೆ ಇಂದು ಕಾರವಾರದಲ್ಲಿ ನಡೆದಿದೆ.

ಕಾರವಾರದ ಕ್ರಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಪಡೆಯಲು ಬೆಳಿಗ್ಗೆಯಿಂದ ಜನ ಸಾಲುಗಟ್ಟಿದ್ದರು. ಆದರೆ ಕೆಲ ಹೊತ್ತಿನ ಬಳಿಕ ಕೇವಲ 150 ಜನರಿಗೆ ಮಾತ್ರ ಲಸಿಕೆ ನೀಡುವುದಾಗಿ ಸಿಬ್ಬಂದಿ ತಿಳಿಸಿದ್ದರಾದರೂ ಜನ ಲಸಿಕೆಗಾಗಿ ಕಾದು ನಿಂತಿದ್ದರು.

ಕೊನೆಗೆ 150 ಜನರಿಗೆ ಲಸಿಕೆ ಹಾಕಿದ ಬಳಿಕ ಬಾಗಿಲು ಬಂದ್ ಮಾಡಲು ಮುಂದಾಗಿದ್ದು ಈ ವೇಳೆ ಲಸಿಕೆಗಾಗಿ ಕಾದು ಕುಳಿತಿದ್ದವರು ಬಾಗಿಲು ಬಂದ್ ಮಾಡಲು ಬಿಡದೆ ಆಸ್ಪತ್ರೆ ಒಳಭಾಗಕ್ಕೆ ತೆರಳಲು ಯತ್ನಿಸಿದ್ದರು. ಸ್ಥಳದಲ್ಲಿದ್ದ ಪೊಲೀಸರು ಹಾಗೂ ಸಿಬ್ಬಂದಿ ತಡೆಯಲು ಹರಸಾಹಸ ಪಡಬೇಕಾದ ಸ್ಥಿತಿ ನಿರ್ಮಾಣವಾಗಿತ್ತು.

ಪ್ರತಿನಿತ್ಯ 300 ಕ್ಕೂ ಹೆಚ್ಚು ಜನರಿಗೆ ವ್ಯಾಕ್ಸಿನ್ ನೀಡಲಾಗುತ್ತಿತ್ತು. ಆದರೆ ಇಂದು ಕೇವಲ 150 ಜನರಿಗೆ ವ್ಯಾಕ್ಸಿನ್ ನೀಡುವುದಾಗಿ ತಿಳಿಸುತ್ತಿದ್ದಾರೆ. ಯಾವಾಗ ಬಂದಾಗಲೂ ವ್ಯಾಕ್ಸಿನ್ ಸ್ಟಾಕ್ ಇಲ್ಲ ಎಂದು ತಿಳಿಸಲಾಗುತ್ತಿದೆ. ನಾವು ಕೆಲಸ ಕಾರ್ಯವನ್ನು ಬಿಟ್ಟು ಸಾಲುಗಟ್ಟಿದ್ದರು ಪ್ರಯೋಜನವಾಗುತ್ತಿಲ್ಲ. ಈಗ ಬಂದವರಿಗೆ ವ್ಯಾಕ್ಸಿನ್ ನೀಡುವಂತೆ ವ್ಯಾಕ್ಸಿನ್ ಪಡೆಯಲು ಬಂದವರು ಒತ್ತಾಯಿಸಿದ ಘಟನೆ ನಡೆಯಿತು.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಕಾರವಾರ

Back to top button