ಭಾರೀ ಅಲೆಗೆ ಮುಳುಗಿದ ದೋಣಿ: ಓರ್ವ ಮೀನುಗಾರ ನಾಪತ್ತೆ: ಈಜಿ ದಡ ಸೇರಿದ ಮೂವರು

ಹೊನ್ನಾವರ: ತಾಲೂಕಿನ ಕಾಸರಕೋಡ ಇಕೋ ಬೀಚ್ ಹತ್ತಿರ ನಾಡ ದೋಣಿ ಅವಘಡ ಸಂಭವಿಸಿದೆ. ಬೆಳಿಗ್ಗೆ 06 ಗಂಟೆ ಸುಮಾರಿಗೆ ಹೊನ್ನಾವರ ಕಾಸರಕೋಡ ಗ್ರಾಮದಿಂದ ನಾಡದೋಣಿ ಯಲ್ಲಿ ಸಮುದ್ರಕ್ಕೆ ಮೀನುಗಾರಿಕೆಗೆ ಹೋಗುತ್ತಿದ್ದ, ಮೀನುಗಾರಿಕಾ ದೋಣಿ ಸಮುದ್ರದ ಭಾರೀ ಅಲೆಗೆ ಕಾಸರಕೋಡ ಇಕೋ ಬೀಚ್ ಹತ್ತಿರ ಸಮುದ್ರದಲ್ಲಿ ಮುಳುಗಿದೆ.

ಇದರಿಂದ ದೋಣಿಯಲ್ಲಿದ್ದ ಮೀನುಗಾರರೊಬ್ಬರು ಕಾಣೆಯಾಗಿದ್ದಾರೆ. ಕಾಣೆಯಾದ ಮೀನುಗಾರರನ್ನು ಉದಯ ತಾಂಡೇಲ್ ಎಂದು ಗುರುತಿಸಲಾಗಿದೆ. ದೋಣಿಯಲ್ಲಿದ್ದ ಇನ್ನುಳಿದ ಮೀನುಗಾರರಾದ ವಿಜಯ್ ಕ್ರಿಸ್ತಾದಾಸ್ ಪರ್ನಾಂಡೀಸ್, ಶಂಕರ ಮಾದೇವ ತಾಂಡೇಲ್ , ಕಾಮೇಶ್ವರ ದೇವಯ್ಯ ತಾಂಡೇಲ್ ಇವರು ಈಜಿಕೊಂಡು ದಡ ಸೇರಿದ್ದು ಸುರಕ್ಷಿತವಾಗಿದ್ದಾರೆ. ಕಾಣೆಯದ ಮೀನುಗಾರರ ಪತ್ತೆಗೆ ಪ್ರಯತ್ನ ಮುಂದುವರಿದಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

Exit mobile version