Uttara Kannada
Trending

ಕೋವಿಡ್ ಲಸಿಕೆ: ಮೂರನೇ ಸ್ಥಾನದಲ್ಲಿದೆ ಉತ್ತರಕನ್ನಡ: ಆರೋಗ್ಯ ಸಿಬ್ಬಂದಿಗಳ ಕಾರ್ಯಕ್ಕೆ ಶ್ಲಾಘನೆ

ಕಾರವಾರ: ಕೋವಿಡ್ ಲಸಿಕೆಯನ್ನು ನೀಡುವ ಪ್ರಕ್ರಿಯೆಯಲ್ಲಿ ಲಸಿಕೆಯನ್ನು ವ್ಯರ್ಥ ಮಾಡದೇ ಶೂನ್ಯ ವ್ಯರ್ಥ ಸಾಧನೆ ಮಾಡಿರುವ ರಾಜ್ಯದ ಜಿಲ್ಲೆಗಳಲ್ಲಿ ಉತ್ತರ ಕನ್ನಡ ಜಿಲ್ಲೆ ಟಾಪ್ ಮೂರನೇ ಸ್ಥಾನಗಳಿಸಿದೆ. ಈ ಶ್ರೇಯಸ್ಸು ಜಿಲ್ಲೆಯ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಸಲ್ಲಬೇಕಿದೆ.

ಕೋವಿಡ್ ಲಸಿಕೆಗೆ ಬಹು ಬೇಡಿಕೆ ಇರುವ ಸಂದರ್ಭದಲ್ಲಿ ಲಸಿಕೆ ನೀಡುವ ಪ್ರಕ್ರಿಯೆಯಲ್ಲಿ ಲಸಿಕೆ ವ್ಯರ್ಥವಾಗುವುದು ದೊಡ್ಡ ನಷ್ಟವಾಗಿದೆ. ಸದ್ಯದ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ 1.30 ಲಕ್ಷ ಡೋಸ್‌ಗಳಷ್ಟು ಲಸಿಕೆ ವ್ಯರ್ಥವಾಗಿದೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ 4 ಲಕ್ಷ ಡೋಸ್‌ಗಳಷ್ಟು ಲಸಿಕೆ ನೀಡಲಾಗಿದ್ದು, ಈ ಪ್ರಕ್ರಿಯೆಯಲ್ಲಿ ಒಂದೂ ಲಸಿಕೆಯನ್ನು ಸಹ ವ್ಯರ್ಥ ಮಾಡದೇ ಹೆಚ್ಚುವರಿ 6381 ಜನರಿಗೆ ಲಸಿಕೆ ನೀಡುವ ಮೂಲಕ ಗಮನ ಸೆಳೆಯುವ ಸಾಧನೆ ಮಾಡಿದೆ.

ಲಸಿಕೆ ವ್ಯರ್ಥಗೊಳಿಸದೇ ಇರುವುದರಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಾಧನೆ ಶೇ. 3.6 ಇದ್ದು, ಮೂರನೇ ಸ್ಥಾನದಲ್ಲಿದ್ದರೆ, ಹೆಚ್ಚುವರಿ ಲಸಿಕೆ ನೀಡುವಿಕೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಲಸಿಕೆ ವ್ಯರ್ಥಗೊಳಿಸದೇ ಇರುವ ಜಿಲ್ಲೆಗಳಲ್ಲಿ ಧಾರವಾಡ ಜಿಲ್ಲೆ ಒಂದನೆ ಸ್ಥಾನದಲ್ಲಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್ ಕಾರವಾರ

Back to top button