Follow Us On

WhatsApp Group
Important
Trending

ಪತ್ನಿ ಮೇಲಿದೆ ಪತಿಯನ್ನು ಸಾಯಿಸಿ ನಾಪತ್ತೆ ಮಾಡಿದ ಆರೋಪ? ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ ನಾಪತ್ತೆಯಾದ ವ್ಯಕ್ತಿಯ ಅಕ್ಕ

ಯಲ್ಲಾಪುರ: ಪತ್ನಿಯೇ ತನ್ನ ಕುಟುಂಬದವರೊoದಿಗೆ ಸೇರಿಕೊಂಡು ಗಂಡನನ್ನು ಸಾಯಿಸಿ, ಮೃತದೇಹವನ್ನು ನಾಪತ್ತೆ ಮಾಡಿದ್ದಾರೆ ಎಂಬ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತನ್ನ ಗಂಡ ಕಾಣೆಯಾದ ಬಗ್ಗೆ ಜೂನ್ 21 ರಂದು ಹೆಂಡತಿಯೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಆದರೆ ಇದೀಗ ಪ್ರಕರಣಕ್ಕೆ ಹೊಸ ಟ್ಟಿಸ್ಟ್ ನತ್ತ ಸಾಗಿದೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅನೈತಿಕ ಸಂಬoಧದ ಕಾರಣಕ್ಕೆ ತನ್ನ ತಮ್ಮನನ್ನು ಆತನ ಹೆಂಡತಿ ಹಾಗೂ ತವರುಮನೆಯವರು ಕೊಲೆ ಮಾಡಿರಬಹುದು ಎಂದು ಶಂಕೆ ವ್ಯಕ್ತಪಡಿಸಿ, ನಾಪತ್ತೆಯಾದ ವ್ಯಕ್ತಿಯ ಅಕ್ಕ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ತನಿಖೆ ಆರಂಭಿಸಿದ ಪೊಲೀಸರಿಗೆ ಮಹತ್ವದ ಸುಳಿವು ದೊರೆತಿದೆ ಎನ್ನಲಾಗಿದೆ.

ರಾಜೇಶನ ಪತ್ನಿಗೆ ಬೇರೆಯವರ ಜೊತೆ ಅನೈತಿಕ ಸಂಬoಧವಿತ್ತು. ಹೀಗಾಗಿ ಮನೆಯಲ್ಲಿ ಪದೇ ಪದೇ ಜಗಳವಾಗುತ್ತಿತ್ತು. ಎಷ್ಟೆ ರಾಜೀ ಪಂಚಾಯತಿ ಮಾಡಿದರೂ ಸುಧಾರಿಸಲಿಲ್ಲ. ಈ ನಡುವೆ ಜೂನ್ 10 ರಂದು ರಾಜೇಶ್ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾನೆ ಎಂದು ಅಕ್ಕ ದೂರಿನಲ್ಲಿ ತಿಳಿಸಿದ್ದಾಳೆ. ಜೂನ್ 10 ರಂದು ರಾತ್ರಿ ಜಗಳವಾಡಿ ಆತನನ್ನು ಸಾಯಿಸಿ ನಾಶಪಡಿಸಿದ್ದಾರೆ ಎಂದು ಆರೋಪಿಸಿದ್ದಾರೆ .

ವಿಸ್ಮಯ ನ್ಯೂಸ್, ಯಲ್ಲಾಪುರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button