ಉತ್ತರಕನ್ನಡಕ್ಕೆ ಆಗಮಿಸುತ್ತಿದ್ದಾರೆ ಮುಖ್ಯಮಂತ್ರಿ: ಬಿಎಸ್ ಯಡಿಯೂರಪ್ಪ ಸ್ವಾಗತಕ್ಕೆ ಸಜ್ಜಾಗುತ್ತಿದೆ ಕಾರವಾರ

ಕಾರವಾರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜುಲೈ 16ರಂದು ಕಾರವಾರಕ್ಕೆ ಆಗಮಿಸಿ  ಕ್ಷೇತ್ರದ ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದು, ಕಾರ್ಯಕ್ರಮದ ರೂಪುರೇಷ ಸಿದ್ದಪಡಿಸುವಂತೆ ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ ಬಿ.ಪಿ ಚನ್ನಬಸವೇಶ ಸೂಚಿಸಿದ್ದಾರೆ.

ಕಾರವಾರ ಅಂಕೋಲಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಉದ್ದೇಶದಿಂದ ಜುಲೈ 16ರಂದು ಮುಖ್ಯಮಂತ್ರಿ ಆಗಮಿಸಲಿದ್ದಾರೆ. ಕಾರ್ಯಕ್ರಮಗಳ ಪಟ್ಟಿ ಸಿದ್ದಪಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಅಧಿಕೃತ ಮಾಹಿತಿ ನೀಡಲಾಗಿದೆ.

ಶಾಸಕಿ ರೂಪಾಲಿ ಎಸ್.ನಾಯ್ಕ ಮಾರ್ಚ್ 2021ರಲ್ಲಿ ಮುಖ್ಯಮಂತ್ರಿ ಅವರಿಗೆ ಲಿಖಿತ ಮನವಿ ಮಾಡಿ, ಕ್ಷೇತ್ರಕ್ಕೆ ಆಗಮಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸುವಂತೆ ಕೋರಿದ್ದರು. ಸ್ಪಂದಿಸಿದ ಮುಖ್ಯಮಂತ್ರಿಗಳು ಕಾರವಾರಕ್ಕೆ ಆಗಮಿಸಿ ಉದ್ಘಾಟನೆ ನೆರವೇರಿಸಲು ಸಮ್ಮತಿಸಿದ್ದಾರೆ.

ಶಾಸಕರು ಈ ಹಿಂದೆಯೂ ಮುಖ್ಯಮಂತ್ರಿಯನ್ನು ಕ್ಷೇತ್ರಕ್ಕೆ ಕರೆತರಲು ಪ್ರಯತ್ನಿಸಿದ್ದರಾದರೂ ಅದೇ ಸಮಯಕ್ಕೆ ರಾಜ್ಯಾದ್ಯಂತ ಕೊರೊನಾ ಸಂಕಷ್ಟ ಎದುರಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮ ಮುಂದಕ್ಕೆ ಹೋಗಿತ್ತು.

ವಿಸ್ಮಯ ನ್ಯೂಸ್, ಕಾರವಾರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Exit mobile version