Follow Us On

WhatsApp Group
Important
Trending

ಬೈಕ್ ಸವಾರನ ಮೇಲೆ ಹರಿದ ಲಾರಿ : ಹೆಲ್ಮೆಟ್ ಪುಡಿಪುಡಿಯಾಗಿ ತಲೆ ಛಿದ್ರ ಛಿದ್ರ: ರಸ್ತೆ ದಾಟುವ ವೇಳೆ ದುರಂತ

ಸ್ಥಳದಲ್ಲೇ ಬೈಕ್ ಸವಾರ ಸಾವು

ಭಟ್ಕಳ: ಇಲ್ಲಿನ ತಾಲೂಕಾ ಪಂಚಾಯತ ಎದುರಿನ ರಾಷ್ಟ್ರಿಯ ಹೆದ್ದಾರಿಯಲ್ಲಿ ಆಕ್ಟಿವಾ ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದಾನೆ, ಮೃತ ವ್ಯಕ್ತಿ ಅಬ್ದುಲ್ ಖಾದಿರ್ ಇಶ್ತಿಯಾಕ್, ಜಾಮಿಯಾಬಾದ್ ಮದಿನಾ ಕಾಲೋನಿ ನಿವಾಸಿ ಎಂದು ತಿಳಿದುಬಂದಿದೆ.

ಬೈಕ್ ಸವಾರ ರಸ್ತೆ ದಾಟುವೆ ವೇಳೆ ಈ ಅಪಘಾತ ಸಂಭವಿಸಿರಬಹುದೆoದು ಹೇಳಲಾಗುತ್ತಿದೆ. ಅಪಘಾತ ರಭಸಕ್ಕೆ ಲಾರಿ ಚಕ್ರ , ಆಕ್ಟೀವಾ ಬೈಕ್ ಸವಾರನ ತಲೆಯ ಮೇಲೆ ಹರಿದು ಹೋಗಿರುವುದರಿಂದ ತಲೆ ಭಾಗ ಛಿದ್ರ ಛಿದ್ರವಾಗಿದ್ದು , ಗುರುತು ಪತ್ತೆಹಚ್ಚಲಾಗದ ಸ್ಥಿತಿಯಲ್ಲಿ ರಸ್ತೆ ಮೇಲೆ ಶವ ಬಿದ್ದಿದೆ.

ಅಪಘಾತದ ವೇಳೆ ಆಕ್ಟಿವಾ ಬೈಕ್ ಸವಾರನು ಹೆಲ್ಮೆಟ್ ಧರಿಸಿದ್ದರು ಹೆಲ್ಮೆಟ್ ಪುಡಿ ಪಡಿಯಾಗಿದೆ. ಸ್ಥಳಕ್ಕೆ ನಗರ ಠಾಣಾ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

                                                     

Back to top button