ತಿಂಡಿ ಕೊಡಿಸುವುದಾಗಿ ಹೇಳಿ ಮಗುವಿನ ಅಪಹರಣ: ಕೂಲಿ ದಂಪತಿಗೆ ಮೋಸ ಮಾಡಿದ ಪಾಪಿ: ಆರೋಪಿಯನ್ನು ಕುಮಟಾ ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ ಪೊಲೀಸರು

ಮಗುವನ್ನು ಕದ್ದು ಮಾರಾಟ ಮಾಡಲು ಯತ್ನ?

ಕುಮಟಾ:ಮಗುವಿಗೆ ತಿಂಡಿ ಕೊಡಿಸುವುದಾಗಿ ಹೇಳಿ ಅಪಹರಣ ಮಾಡಿ ಪರಾಯಾಗುತ್ತಿದ್ದ ಆರೋಪಿಯನ್ನು ಕುಮಟಾ ಪೋಲೀಸರು ಕುಮಟಾ ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಆರೋಪಿ ಪರಶುರಾಮ್ ಹರಿಜನ ಎನ್ನಲಾಗಿದ್ದು, ಈತ ಬಾದಾಮಿಯವನು ಎಂದು ತಿಳಿದುಬಂದಿದೆ.

ಎರಡು ವರ್ಷದ ನಾಲ್ಕು ತಿಂಗಳ ಶಿವರಾಜ್ ಎನ್ನುವ ಮಗುವನ್ನು ರಕ್ಷಿಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಉಡುಪಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ದಂಪತಿಯ ಪರಿಚಯ ಮಾಡಿಕೊಂಡಿದ್ದ ಆರೋಪಿ, ಸಮಯ ನೋಡಿ, ತಿಂಡಿಕೊಡಿಸುವುದಾಗಿ ಹೇಳಿ ಮಗುವನ್ನು ಕರೆದುಕೊಂಡು ಬಂದು ಅಪಹರಿಸಿದ್ದ. ಎಷ್ಟು ಹೊತ್ತು ಕಳೆದರು ಮಗು ಬಾರದೆ ಇರುವುದನ್ನು ನೋಡಿ, ಆತಂಕಗೊಂಡ ಪೋಷಕರು ಪೊಲೀಸರಿಗೆ ಮಾಹಿತಿ ನೋಡಿದ್ದರು. ಸಿಸಿಟಿವಿ ದೃಶ್ಯ ಪರಿಶೀಲಿಸಿದ್ದ ಪೊಲೀಸರು ಕಾರ್ಯಾಚರಣೆಗಿಳಿದಿದ್ದರು.

ಉಡುಪಿ ಪೋಲೀಸರು ನೀಡಿದ ಮಾಹಿತಿ ಮೇರೆಗೆ ತಕ್ಷಣ ಕುಮಟಾ ಪೊಲೀಸರು ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈತ ಯಾವ ಉದ್ದೇಶದಿಂದ ಮಗುವನ್ನು ಅಪಹರಿಸಿದ್ದಾನೆ ಎಂಬುದು ಇನ್ನೂ ತಿಳಿದುಬಂದಿಲ್ಲ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್ ಕುಮಟಾ

Exit mobile version