Follow Us On

WhatsApp Group
Important
Trending

ಪಾರ್ಶ್ವವಾಯು ಚಿಕಿತ್ಸೆಗೆ ತೆರಳುತ್ತಿದ್ದವರ ಕಾರು, ಗೂಡ್ಸ್ ರಿಕ್ಷಾ ಅಪಘಾತ; ಮೂವರು ಗಂಭೀರ

ಕಾರವಾರ: ಕಾರು ಮತ್ತು ಗೂಡ್ಸ್ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿಯಾಗಿ ಪಾರ್ಶ್ವವಾಯು ಚಿಕಿತ್ಸೆಗೆ ತೆರಳುತ್ತಿದ್ದ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಕಾರವಾರದ ಬೈತಖೋಲ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಗಾಯಗೊಂಡವರನ್ನು ಗದಗ ಜಿಲ್ಲೆಯ ರೋಣ ಮೂಲದವರೆಂದು ಗುರುತಿಸಲಾಗಿದೆ. ಮೂವರು ಕಾರಿನಲ್ಲಿ ಕಾರವಾರದ ಹಳಗಾ ಆಸ್ಪತ್ರೆಗೆ ಪಾರ್ಶ್ವ ವಾಯು ಚಿಕಿತ್ಸೆಗೆ ತೆರಳುತ್ತಿದ್ದರು.

ಆದರೆ ಬೈತಖೋಲ್ ಬಳಿ ಗೂಡ್ಸ್ ರಿಕ್ಷಾಗೆ ಡಿಕ್ಕಿಯಾಗಿ ಹೆದ್ದಾರಿಯಲ್ಲಿ ಸಂಪೂರ್ಣ ಸಂಚಾರ ಬಂದಾಗಿದೆ. ವಾಹನವನ್ನು ತೆರೆಯಲು ಸಾಧ್ಯವಾಗದ ಕಾರಣ ಸುಮಾರು ಒಂದು ತಾಸಿಗೂ ಹೆಚ್ಚಿನ ಕಾಲ ಟ್ರಾಫಿಕ್ ಜಾಮ್ ಸಂಭವಿಸಿ ನಾಲ್ಕೈದು ಕಿ.ಮಿ ದೂರದ ವರೆಗೂ ವಾಹನಗಳು ಸಾಲುಗಟ್ಟಿದ್ದವು. ಬಳಿಕ ಸ್ಥಳಕ್ಕಾಗಮಿಸಿ ಕ್ರೇನ್ ತಂದು ಕಾರನ್ನು ತೆರವುಗೊಳಿಸಿದ್ದು ಬರೋಬ್ಬರಿ ಒಂದು ತಾಸಿನ ಬಳಿಕ ವಾಹನ ಸಂಚಾರ ಆರಂಭಗೊಂಡಿದೆ. ಈ ಬಗ್ಗೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಕಾರವಾರ

Back to top button