Important
Trending

ಕ್ವಿಂಟಲ್ ಗಟ್ಟಲೇ ಚಾಕ್ಲೇಟ್ ರಸ್ತೆಯಲ್ಲಿ ಎಸೆದುಹೋದ ಡೀಲರ್! ಯಾಕೆ ಗೊತ್ತಾ‌ ನೋಡಿ?

ಸ್ಥಳೀಯರಿಂದ ದೂರು ದಾಖಲು

ಶಿರಸಿ: ಅವಧಿ ಮುಗಿದ ಕ್ವಿಂಟಲ್ ಗೂ ಹೆಚ್ಚು ತೂಕದ ಚಾಕಲೇಡ್ ಅನ್ನು ರಸ್ತೆಯಲ್ಲಿ ಎಸೆದುಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಹುಡ್ಲಮನೆ ರಸ್ತೆಯಲ್ಲಿ ನಡೆದಿದೆ.

ಕ್ಯಾಂಡಿ ಕಂಪನಿಗೆ ಸೇರಿದ ವಿವಿಧ ಬಗೆಯ ಪ್ಲೇವರ್ ಹೊಂದಿದ ಚಾಕ್ಲೆಟ್ ಇದಾಗಿದ್ದು ಕರೋನಾ ಲಾಕ್ ಡೌನ್ ನಿಂದ ಈ ಕಂಪನಿಯ ಚಾಕಲೇಟ್ ಗಳು ಮಾರುಕಟ್ಟೆಯಲ್ಲಿ ಬಿಕರಿಯಾಗಿಲ್ಲ. ಈ ಕಾರಣದಿಂದ ಅವಧಿ ಮುಗಿದಿದ್ದು ಇದನ್ನು ನಗರಸಭೆಯ ಕಸ ವಿಲೇವಾರಿಗೆ ನೀಡದೇ ಈ ಚಾಕ್ಲೇಟ್ ಕಂಪನಿಯ ಡೀಲರ್ ಇವುಗಳನ್ನು ಹೀಗೆ ರಸ್ತೆ ಪಕ್ಕದಲ್ಲಿ ಎಸೆದಿದ್ದಾರೆ.

ಅವಧಿ ಮುಗಿದ ಚಾಕಲೇಟ್

ಇನ್ನು ಹೀಗೆ ಎಸೆದ ಚಾಕ್ಲೇಟ್ ಅನ್ನು ದನಗಳು ತಿಂದರೆ ,ಇನ್ನು ಕೆಲವು ಮಕ್ಕಳು ಎತ್ತಿಕೊಂಡು ಹೋಗಿದ್ದಾರೆ. ಇನ್ನು ರಾಶಿಗಟ್ಟಲೇ ಈ ಚಾಕಲೇಟ್ ಗಳು ರಸ್ತೆ ಪಕ್ಕದಲ್ಲಿ ಬಿದ್ದಿದ್ದು ಪಕ್ಕದಲ್ಲೇ ಕೆರೆ ಸಹ ಇರುವುದರಿಂದ ಮಳೆಯಲ್ಲಿ ಈ ನೀರಿಗೆ ಸೇರಿ ಮಲೀನವಾಗಲಿದೆ.ಹೀಗಾಗಿ ಸ್ಥಳೀಯ ಜನರು ಈ ಚಾಕ್ಲೇಟ್ ಕಂಪನಿ ಡೀಲರ್ ವಿರುದ್ಧ ನಗರಸಭೆಗೆ ದೂರು ಸಹ ನೀಡಿದ್ದಾರೆ.

ವಿಸ್ಮಯ ನ್ಯೂಸ್, ಶಿರಸಿ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button