ಕಾರವಾರ: ಕೇಂದ್ರ ಸರ್ಕಾರದ ಪ್ರಸ್ತಾವಿತ ವಿದ್ಯುತ್ (ತಿದ್ದುಪಡಿ) ವಿಧೇಯಕದ ವಿರುದ್ಧ ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾದ ಶಿವಾನಂದ ಹೆಗಡೆ ಕಡತೋಕಾ ಮುಂದಾಳತ್ವದಲ್ಲಿ ಕಾರವಾರದಲ್ಲಿ ಪ್ರತಿಭಟನಾ ಮನವಿ ಸಲ್ಲಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿಗೆ ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾದ ಶಿವಾನಂದ ಹೆಗಡೆ ಕಡತೋಕಾ ಅವರ ನೇತೃತ್ವದಲ್ಲಿ ಆಗಮಿಸಿದ ಕಿಸಾನ್ ಕಾಂಗ್ರೆಸ್ ನ ಪದಾಧಿಕಾರಿಗಳು ಕೇಂದ್ರ ಸರ್ಕಾರ ತರಾತುರಿಯಲ್ಲಿ ತರಲಿರುವ ವಿದ್ಯುತ್ ತಿದ್ದುಪಡಿ ಮಸೂದೆ ತಾರತಮ್ಯದಿಂದ ಕೂಡಿದೆ. ಪ್ರಧಾನಿ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರ ವಿದ್ಯುತ್ ತಿದ್ದುಪಡಿ ಮಸೂದೆ ಜಾರಿಗೊಳಿಸಿ ಸ್ನೇಹಿತರಾದ ವಿದ್ಯುತ್ ಉದ್ಯಮಿ ಗೌತಮ್ ಅಂಬಾನಿ ಮತ್ತು ಇತರರಿಗೆ ಲಾಭ ಮಾಡಿಕೊಡಲು ಪ್ರಯತ್ನಿಸುತ್ತಿದೆ ಎಂದು ದೂರಿದರು. ರೈತರಿಗೆ ನೀಡಲಾಗುತ್ತಿರುವ ಉಚಿತ ವಿದ್ಯುತ್ ಯೋಜನೆಯನ್ನು ಸ್ಥಗಿತಗೊಳಿಸುವುದಲ್ಲದೆ ಇಂತಹ ಗಂಭೀರ ವಿಚಾರದಲ್ಲಿ ಕೇಂದ್ರ ಸರ್ಕಾರ ರೈತರ ಜೊತೆ ಚಲ್ಲಾಟವಾಡುತ್ತಿದೆ. ರಾಜ್ಯ ಸರ್ಕಾರಕ್ಕೆ ಅಭಿಪ್ರಾಯ ಸಲ್ಲಿಸಲು ಗಡುವು ನೀಡಲಾಗಿದ್ದು ರಾಜ್ಯ ಸರ್ಕಾರ ಪ್ರಸ್ತಾವಿತ ತಿದ್ದುಪಡಿ ಮಸೂದೆಗೆ ಒಪ್ಪಿಗೆ ಸೂಚಿಸಬಾರದು. ರೈತರ ಹಿತಕ್ಕೆ ಧಕ್ಕೆ ಬಂದಲ್ಲಿ ರೈತರೊಡನೆ ಸೇರಿ ಉಗ್ರ ಹೋರಾಟ ಮಾಡಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿ ಅಪರ ಜಿಲ್ಲಾಧಿಕಾರಿ ನಾಗರಾಜ ಸಿಂಗ್ರೆರ್ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯ ಕಿಸಾನ್ ಕಾಂಗ್ರೆಸ್ ಪದಾಧಿಕಾರಿ ಜಿಲ್ಲಾ ಪಂಚಾಯತ್ ಸದಸ್ಯ ದೀಪಕ ನಾಯ್ಕ್ ಮಂಕಿ, ಗಜಾನನ ನಾಯ್ಕ್ ಸಾಲಕೋಡ್, ಆನಂದ್ ನಾಯ್ಕ್, ಮಂಜುನಾಥ ನಾಯ್ಕ್, ಅರುಣ್ ನಾಯ್ಕ್, ಬಾಲು ಭಂಡಾರಿ, ವಿನೋದ್ ನಾಯ್ಕ್ ಕರ್ಕಿ, ಸುರೇಶ್ ಮೇಸ್ತ ಮುಂತಾದವರು ಉಪಸ್ಥಿತರಿದ್ದರು.
Read Next
December 6, 2021
ಆರ್.ಎನ್.ಎಸ್ ಪ್ರಥಮ ದರ್ಜೆ ಕಾಲೇಜು ಮುರುಡೇಶ್ವರದಲ್ಲಿ ಬಿ.ಕಾಂ, ಬಿಬಿ.ಎ ಹಾಗೂ ಬಿ.ಸಿ.ಎ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ
November 22, 2021
ನ್ಯಾಷನಲ್ ಓಪನ್ ಅಥ್ಲೆಟಿಕ್ ಶಿಫ್ ನಲ್ಲಿ ಪದಕ ಗೆದ್ದ ವಿದ್ಯಾರ್ಥಿನಿಗೆ ಕಾರ್ಮಿಕ ಖಾತೆ ಸಚಿವರಿಂದ ಸನ್ಮಾನ
November 21, 2021
ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ
November 20, 2021
ಎಂ.ಎಸ್ಸಿ ಪರೀಕ್ಷೆಯಲ್ಲಿ ಶೇ.100 ಸಾಧನೆ ಮಾಡಿದ ವಿದ್ಯಾರ್ಥಿಗಳು| ಜಿ.ಸಿ. ಕಾಲೇಜಿನ ಶೈಕ್ಷಣಿಕ ಹಿರಿಮೆಗೆ ಮತ್ತೊಂದು ಗರಿ
Related Articles
Check Also
Close