ಕಾರವಾರದ ಸಮೀಪ ಗುಡ್ಡ ಕುಸಿತ; ಹೆದ್ದಾರಿಗೆ ನೀರು ನುಗ್ಗಿ ಸಂಚಾರ ಅಸ್ತವ್ಯಸ್ಥ!

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಇಂದು ಕೂಡ ಮುಂದುವರಿದಿದ್ದು, ಕಾರವಾರದ ಅಸ್ನೋಟಿ ಬಳಿ ಮಳೆ ನೀರು ನುಗ್ಗಿ ರಾಜ್ಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡ್ಡಿಯಾಗಿರುವ ಘಟನೆ ನಡೆದಿದೆ. ಕಳೆದ ನಾಲ್ಕೈದು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆ ಕಾರವಾರದಲ್ಲಿಯೂ ಮುಂದುವರಿದಿದ್ದು, ಅಸ್ನೋಟಿ ಬಳಿ ಗುಡ್ಡಕುಸಿತವಾಗಿದೆ.

ಈ ಭಾಗದ ಗುಡ್ಡದ ಮೇಲ್ಬಾಗದಿಂದ ಬಂದ ನೀರು ಕುಸಿದ ಮಣ್ಣಿನೊಂದಿಗೆ ಕೊಚ್ಚಿಕೊಂಡು ಬಂದು ಹೆದ್ದಾರಿಯಲ್ಲಿ ಹರಿಯುತ್ತಿದ್ದು ಕಾರವಾರ ದಾಂಡೇಲಿ ಮೂಲಕ ಬೆಳಗಾವಿ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡ್ಡಿಯಾಗಿತ್ತು.. ಹೆದ್ದಾರಿಯಲ್ಲಿ ಭಾರಿ ಪ್ರಮಾಣದಲ್ಲಿ ಮಣ್ಣು ಮಿಶ್ರಿತ ನೀರು ಹರಿಯುತ್ತಿರುವ ಕಾರಣ ಸಂಚಾರ ದುಸ್ತರವಾಗಿದೆ. ಬೈಕ್ ಸವಾರರು ಓಡಾಟಕ್ಕೆ ಹರಸಾಹಸ ಪಡಬೇಕಾದ ಸ್ಥಿತಿ ನಿರ್ಮಾಣವಾಗಿತ್ತು.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಕಾರವಾರ

Exit mobile version