
ಕಾರವಾರ: ನೆರೆ ಪ್ರವಾಹದಿಂದಾಗಿ ತಡರಾತ್ರಿಯಿಂದ ಮುಳುಗಡೆಯಾಗಿದ್ದ ಮಣ್ಣಿನ ಮನೆಯೊಂದು, ನೋಡ ನೋಡುತ್ತಿದ್ದಂತೆ ಕುಸಿದು ಬಿದ್ದಿರುವ ಘಟನೆ ಅಂಕೋಲಾ ಹಿಚ್ಕಡ ಗ್ರಾಮದಲ್ಲಿ ನಡೆದಿದೆ. ಗಂಗಾವಳಿ ನದಿ ಪ್ರವಾಹದಿಂದ ತಡರಾತ್ರಿಯೇ ಮನೆಗಳಿಗೆ ನುಗ್ಗಿದ್ದ ನೀರು ಇಂದು ಕೂಡ ಇಳಿಯ ಕಾರಣ ಮಣ್ಣಿನ ಗೋಡೆ ನೆನೆದಿತ್ತು. ಇಂದು ಮಧ್ಯಾಹ್ನದ ಬಳಿಕ ಮನೆಯವರ ಎದುರೇ ಮನೆ ಸಂಪೂರ್ಣ ಕುಸಿದು ಬಿದ್ದಿದ್ದು, ಈ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.
ಇನ್ನು ಹಿಚ್ಕಡ ಗ್ರಾಮ ಬಹುತೇಕ ನೆರೆಯಿಂದ ಜಲಾವೃತಗೊಂಡಿದ್ದು 50ಕ್ಕೂ ಹೆಚ್ಚು ಮನೆಗಳು ಭಾಗಶಃ ಮುಳುಗಡೆಯಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸದ್ಯ ಈ ಭಾಗದ ಸ್ಥಳೀಯರನ್ನು ಸ್ಥಳಾಂತರ ಮಾಡಲಾಗಿದ್ದು, ಕಾಳಜಿ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿದೆ.
ಇಂದಿನ ಪ್ರಮುಖ ಸುದ್ದಿಗಳ ಲಿಂಕ್ ಈ ಕೆಳಗೆ ಇದೆ.
- ಸಾನ್ವಿ ಸ್ಕಿನ್ ಮತ್ತು ಲೇಸರ್ ಸೆಂಟರ್ ನಲ್ಲಿ ಉಚಿತ ಪಿಸಿಯೋಥೆರಪಿ ಶಿಬಿರ
- ಮೇ 21ರ ವರೆಗೆ ರೆಡ್ ಅಲರ್ಟ್ ಘೋಷಣೆ: ಭಾರೀ ಮಳೆಯ ಮುನ್ನೆಚ್ಚರಿಕೆ
- ಮಹಿಳಾ ರಿಸೆಪ್ಯನಿಸ್ಟ್ ಬೇಕಾಗಿದ್ದಾರೆ: ವಸತಿ ಸೌಲಭ್ಯ, ಆಕರ್ಷಕ ಸಂಬಳ
- ನಾಟಿ ವೈದ್ಯ ಬೆಳಂಬಾರದ ಹನುಮಂತಗೌಡರ ಮನೆಯಲ್ಲಿ ಹತ್ತು ಸಾವಿರ ಧನ್ವಂತರಿ ಜಪ, ಹೋಮಹವನ: ಸಮಸ್ತ ಜನರ ಆರೋಗ್ಯ ಸೌಭಾಗ್ಯಕ್ಕೆ ಪ್ರಾರ್ಥನೆ
- ಉಗ್ರರ ದಾಳಿ ಬಳಿಕ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸುತ್ತಿರುವ ವ್ಯಾಪಾರಿಗಳು, ರೈತರು: ವೀಳ್ಯದೆಲೆ ರಪ್ತು ಮಾಡುವುದಿಲ್ಲ ಎಂದ ಬೆಳೆಗಾರರು
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್