
ಕಾರವಾರ: ನೆರೆ ಪ್ರವಾಹದಿಂದಾಗಿ ತಡರಾತ್ರಿಯಿಂದ ಮುಳುಗಡೆಯಾಗಿದ್ದ ಮಣ್ಣಿನ ಮನೆಯೊಂದು, ನೋಡ ನೋಡುತ್ತಿದ್ದಂತೆ ಕುಸಿದು ಬಿದ್ದಿರುವ ಘಟನೆ ಅಂಕೋಲಾ ಹಿಚ್ಕಡ ಗ್ರಾಮದಲ್ಲಿ ನಡೆದಿದೆ. ಗಂಗಾವಳಿ ನದಿ ಪ್ರವಾಹದಿಂದ ತಡರಾತ್ರಿಯೇ ಮನೆಗಳಿಗೆ ನುಗ್ಗಿದ್ದ ನೀರು ಇಂದು ಕೂಡ ಇಳಿಯ ಕಾರಣ ಮಣ್ಣಿನ ಗೋಡೆ ನೆನೆದಿತ್ತು. ಇಂದು ಮಧ್ಯಾಹ್ನದ ಬಳಿಕ ಮನೆಯವರ ಎದುರೇ ಮನೆ ಸಂಪೂರ್ಣ ಕುಸಿದು ಬಿದ್ದಿದ್ದು, ಈ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.
ಇನ್ನು ಹಿಚ್ಕಡ ಗ್ರಾಮ ಬಹುತೇಕ ನೆರೆಯಿಂದ ಜಲಾವೃತಗೊಂಡಿದ್ದು 50ಕ್ಕೂ ಹೆಚ್ಚು ಮನೆಗಳು ಭಾಗಶಃ ಮುಳುಗಡೆಯಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸದ್ಯ ಈ ಭಾಗದ ಸ್ಥಳೀಯರನ್ನು ಸ್ಥಳಾಂತರ ಮಾಡಲಾಗಿದ್ದು, ಕಾಳಜಿ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿದೆ.
ಇಂದಿನ ಪ್ರಮುಖ ಸುದ್ದಿಗಳ ಲಿಂಕ್ ಈ ಕೆಳಗೆ ಇದೆ.
- ಹೆಂಡತಿಗೆ ಊಟ ತಯಾರಿ ಮಾಡಲು ಹೇಳಿ ಕುಳಿತಲ್ಲಿಯೇ ಮೃತಪಟ್ಟ ಪಶು ಚಿಕಿತ್ಸಾಲಯದ ನೌಕರ
- ಬೃಹತ್ ಶೋರೂಮ್ ಬ್ರೌನ್ವುಡ್ ನಲ್ಲಿ 12 ಉದ್ಯೋಗಾವಕಾಶಗಳು: ಇಂದೇ ಸಂಪರ್ಕಿಸಿ
- ವಿದ್ಯಾರ್ಥಿಗಳಿಗೆ ಭಗವದ್ಗೀತೆ ನೀಡಿ ಭವಿಷ್ಯಕ್ಕೆ ಶುಭ ಕೋರಿದ ಪ್ರಮುಖ ಸೌಹಾರ್ದ ಸಹಕಾರಿ
- ಉತ್ತಮ ಭವಿಷ್ಯ ರೂಪಿಸಿಕೊಳ್ಳಲು, ಈಗಿನಿಂದಲೇ ಸಮಯಕ್ಕೆ ಮಹತ್ವ ನೀಡಿ : ಡಾ. ಗಣೇಶ ನಾಗ್ವೇಕರ ಕಲಾ ಮತ್ತು ವಾಣಿಜ್ಯ ವಿದ್ಯಾಲಯದಲ್ಲಿ ನಡೆದ ವಾರ್ಷಿಕ ಸಮ್ಮೇಳನ
- ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಕೇಣಿಯಲ್ಲಿ ಸರ್ವಋತು ಆಳ ಸಮುದ್ರ ಗ್ರೀನ್ಫೀಲ್ಡ್ ಬಂದರಿನ ಅಭಿವೃದ್ಧಿ
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್