Follow Us On

WhatsApp Group
Important
Trending

ಎದುರು ಅಡ್ಡಬಂದ ವಾಹನ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿದ ಪೊಲೀಸ್ ಜೀಪ್ : ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರು

ವಿದ್ಯುತ್ ತಂತಿ ತುಂಡಾಗಿ ಜೀಪ್ ಮೇಲೆ ಬಿತ್ತು

ಹೊನ್ನಾವರ: ಪೊಲೀಸ್ ಜೀಪೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಹೊಡೆದ ಘಟನೆ ತಾಲೂಕಿನಲ್ಲಿ ನಡೆದಿದೆ. ಪೊಲೀಸ್ ಠಾಣೆಯ ಗ್ರೇಡ್ 2 ಪಿಎಸ್‌ಐ ಮತ್ತು ಸಿಬ್ಬಂದಿ ಪ್ರಯಾಣಿಸುತ್ತಿದ್ದ ಜೀಪೋಂದು ಹೊನ್ನಾವರ ತಾಲೂಕಿನ ಭಾಸ್ಕೇರಿ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿದ್ಯುತ್ ಕಂಬಕ್ಕೆ ಗುದ್ದಿ ಅಪಘಾತಕ್ಕೆ ಒಳಗಾದ ಘಟನೆ ಜರುಗಿದೆ. ಜೀಪಿನಲ್ಲಿದ್ದ ಪಿಎಸ್‌ಐ ಮಹಾಂತೇಶ ನಾಯ್ಕ ಮತ್ತು ಸಿಬ್ಬಂದಿ ಪವಾಡಸದೃಶ ರೀತಿಯಲ್ಲಿ ಅಪಾಯದಿಂದ ಪಾರಾಗಿದ್ದಾರೆ.

ಗೇರುಸೊಪ್ಪದಿಂದ ವಾಪಸ್ ಹೊನ್ನಾವರಕ್ಕೆ ಬರುತ್ತಿರುವಾಗ ಬಾಸ್ಕೇರಿ ಹತ್ತಿರ ಎದುರು ಅಡ್ಡ ಬಂದ ವಾಹನ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಪೊಲೀಸ್ ವಾಹನ ಗುದ್ದಿದೆ. ಗುದ್ದಿದ ರಬಸಕ್ಕೆ ವಿದ್ಯುತ್ ತಂತಿ ತುಂಡಾಗಿ ಜೀಪ್ ಮೇಲೆಯೇ ಬಿದ್ದರು ಕೂಡ ಯಾವುದೇ ಅಪಾಯವಾಗಿಲ್ಲ. ಜೀಪ್ ಗುದ್ದಿದ ತಕ್ಷಣ ತುಂಡಾದ ತಂತಿಗೆ ವಿದ್ಯುತ್ ಸಂಪರ್ಕ ಕಡಿತವಾಗಿರುದರಿಮನದ ದೊಡ್ಡ ಅವಘಡ ತಪ್ಪಿದಂತಾಗಿದೆ.

ವಿದ್ಯುತ್ ಸಂಪರ್ಕ ಇದ್ದರೆ ವಾಹನದಲ್ಲಿದ್ದವರಿಗೆ ಅಪಾಯ ಆಗುವ ಸಾಧ್ಯತೆಯಿತ್ತು. ಆದರೆ, ಅದೇ ಕಂಬದ ವಿದ್ಯುತ್ ತಂತಿ ಜೀಪಿಗೆ ಅಡ್ಡ ಸಿಕ್ಕಿ ತಡೆದು ನಿಲ್ಲಿಸಿದ್ದರಿಂದ ಹೊಂಡಕ್ಕೆ ಬೀಳುವುದು ತಪ್ಪಿದೆ. ಪೋಲಿಸ್ ವಾಹನ ಜಖಂ ಆಗಿದ್ದು ವಾಹನದಲ್ಲಿದ್ದ ಮೂವರು ಅಪಾಯದಿಂದ ಪಾರಾಗಿದ್ದಾರೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button