Follow Us On

Google News
Big News
Trending

ಉತ್ತರಕನ್ನಡಕ್ಕೆ ತುರ್ತಾಗಿ 210 ಕೋಟಿ ಬಿಡುಗಡೆ: ಪೂರ್ತಿ ಬಿದ್ದ ಮನೆಗಳಿಗೆ 5 ಲಕ್ಷ, ಭಾಗಶ ಹಾನಿಗೆ 3 ಲಕ್ಷ ಪರಿಹಾರ ಧನ: ಕಳಚೆ ಗ್ರಾಮ ಸ್ಥಳಾಂತರ ಸಾಧ್ಯತೆ ಬಗ್ಗೆ ವರದಿ ನೀಡುವಂತೆ ಸೂಚನೆ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ತುರ್ತಾಗಿ ಜಿಲ್ಲೆಗೆ 210 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದಾರೆ. ಗ್ರಾಮೀಣ ಭಾಗದ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಗೆ 100 ಕೋಟಿ ಹಾಗು ತುರ್ತು ಕಾಮಗಾರಿಗಳಿಗೆ ಆರ್.ಡಿ.ಪಿ.ಆರ್ ಅಡಿಯಲ್ಲಿ 100 ಕೋಟಿ ಅನುದಾನ ಈ ಕೂಡಲೇ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ.

ಅಲ್ಲದೆ, ಹಾನಿಗೊಳಗಾದ ಅರಬೈಲ್ ರಸ್ತೆ ಅಭಿವೃದ್ಧಿಗೆ 10 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಿದ್ದಾರೆ. ಇದೇ ವೇಳೆ ಪ್ರತಿ ಮಳೆಗಾಲದಲ್ಲಿ ಪದೇ ಪದೇ ಹಾನಿಗೊಳಗಾಗುತ್ತಿರುವ ಯಲ್ಲಾಪುರದ ಕಳಚೆ ಭಾಗದ ಜನರ ಸ್ಥಳಾಂತರಕ್ಕೆ 15 ಎಕರೆ ಭೂಮಿ ಗುರುತಿಸುವಂತೆ ಸೂಚಿಸಿದ್ದಾರೆ. ಈ ಭಾಗದಲ್ಲಿ ಪದೇ ಪದೇ ಭೂಕುಸಿತವಾಗುತ್ತಿದೆ. ಕೃಷಿಭೂಮಿಗೆ ಹಾನಿಯಾಗುತ್ತಿದೆ. ಹೀಗಾಗಿ ಇದನ್ನು ಸ್ಥಳಾಂತರಿಸುವoತೆ ಶಿವರಾಮ್ ಹೆಬ್ಬಾರ್ ಕೋರಿದ್ದಾರೆ ಎಂದು ಹೇಳಿದರು.

ಇನ್ನು ಪೂರ್ತಿ ಬಿದ್ದ ಮನೆಗಳಿಗೆ 5 ಲಕ್ಷ, ಭಾಗಶ ಹಾನಿಗೆ 3 ಲಕ್ಷ ಹಾಗು ಸ್ವಲ ಹಾನಿ ಆದರೆ 50 ಸಾವಿರ ಪರಿಹಾರ ಧನ ನೀಡುವಂತೆ ಸೂಚಿಸಿದ್ದಾರೆ. ಸಂತ್ರಸ್ಥರ ಮನೆ ತುರ್ತು ಕೆಲಸಕ್ಕೆ 10 ಸಾವಿರ ಪರಿಹಾರ ಧನ ನೀಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button