Follow Us On

WhatsApp Group
Info
Trending

ಉತ್ತರಕನ್ನಡಕ್ಕೆ ಆಗಮಿಸುತ್ತಿದ್ದಾರೆ ಮಾಜಿ ಸಿಎಂ ಸಿದ್ದರಾಮಯ್ಯ

ಕಾರವಾರ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ಬಳಿಕ ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಕೂಡಾ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಹೌದು, ಮಾಜಿ ಸಿಎಂ ಸಿದ್ದರಾಮಯ್ಯ ಆಗಸ್ಟ್ 2ರಂದು ಜಿಲ್ಲೆಗೆ ಆಗಮಿಸಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಕಾರವಾರಕ್ಕೆ ಆಗಸ್ಟ್ 1 ರಂದು ಆಗಮಿಸಿ, ಆಗಸ್ಟ್ 2 ರ ಸೋಮವಾರ ಜಿಲ್ಲೆಯ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಅಲ್ಲಿನ ಸಮಸ್ಯೆಗಳನ್ನು ಆಲಿಸಲಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸತೀಶ್ ಸೈಲ್, ನೆರೆ  ಹಾವಳಿಯಿಂದ ತೊಂದರೆಗಿಡಾದ ಕಾರವಾರ ಮತ್ತು ಅಂಕೋಲಾ ತಾಲೂಕುಗಳ ವಿವಿಧ  ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ,  ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ, ಮಾಜಿ ಸಚಿವ ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ   ಭೇಟಿ ನೀಡಲಿದ್ದಾರೆ ಎಂದ  ತಿಳಿಸಿದ್ದಾರೆ. ಅಗಸ್ಟ್ 1 ರಂದು ಕಾರವಾರದಲ್ಲಿ ವಾಸ್ತವ್ಯ ಮಾಡಲಿರುವ ಅವರು ಅಗಸ್ಟ್ 2 ರಂದು ಕದ್ರಾ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ಥರೊಂದಿಗೆ ಮಾತನಾಡಿ ಹಣಕೋಣ, ಗೋಟೆಗಾಳಿ, ಘಡಸಾಯಿ, ಕದ್ರಾ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂತ್ರಸ್ಥರ ಅಹವಾಲು ಸ್ವೀಕರಿಸಿ ಕೆ.ಪಿ.ಸಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.

ನಂತರ ಮಲ್ಲಾಪುರ ಭೇಟಿ ನೀಡಲಿರುವ ಅವರು ಅಲ್ಲಿ ಹಾನಿಗೊಳಗಾದ ಪ್ರದೇಶ ವೀಕ್ಷಿಸಿ  ಅಣುಸ್ಥಾವರ ಅಧಿಕಾರಿಗಳೊಂದಿಗೆ ಪರಿಹಾರದ ಕುರಿತು ಚರ್ಚೆ ನಡೆಸಲಿದ್ದಾರೆ .ಮದ್ಯಾಹ್ನ ಅಂಕೋಲಾ ತೆರಳಿ ಶಿರೂರು, ವಾಸರ ಕುದ್ರಿಗೆ ಪ್ರದೇಶಗಳಿಗೆ ಭೇಟಿ ನೀಡಿ ಅಂಕೋಲಾ ಲೋಕೋಪಯೋಗಿ ಇಲಾಖೆ ಅತಿಥಿ ಗೃಹದಲ್ಲಿ ಪರಿಹಾರ ವಿತರಣೆ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿರುವ ಸಿದ್ಧರಾಮಯ್ಯ ಅವರು ತದನಂತರ ನಾಡವರ ಸಭಾ ಭವನದಲ್ಲಿ  ನೆರೆ ಪೀಡಿತ ಜನರ ಅಹವಾಲು ಸ್ವೀಕರಿಸಲಿದ್ದಾರೆ. 

ಅಂಕೋಲಾ ತಾಲೂಕಿನ ನೆರೆ ಪೀಡಿತ  ಡೋಂಗ್ರಿ, ಸುಂಕಸಾಳ, ಹಿಲ್ಲೂರ,ಮೊಗಟಾ,- ಅಚವೆ, ಶೆಟಗೇರಿ, ಬೆಳಸೆ, ವಾಸರೆ, ಹೊನ್ನೆಬೈಲ್, ಅಗ್ರಗೋಣ ಹಾಗೂ ನೆರೆಯಿಂದ  ಸಂಕಷ್ಟಕ್ಕೊಳಗಾದ ಇತರೆ ಎಲ್ಲಾ ಗ್ರಾ.ಪಂ ವ್ಯಾಪ್ತಿಯ  ಜನರು  ಹಾಗೂ ನದಿ ತೀರದ ನಿವಾಸಿಗಳು ಈ ಸಭೆಯಲ್ಲಿ ತಮ್ಮ ಅಹವಾಲುಗಳನ್ನು ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.     

ವಿಸ್ಮಯ ನ್ಯೂಸ್ ವಿಲಾಸ್ ನಾಯಕ ಅಂಕೋಲಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button