ಭಟ್ಕಳ: ಐಸಿಸ್ ನಂಟಿರೋ ಶಂಕೆ ಹಿನ್ನೆಲೆ ಕೇಂದ್ರ ಎನ್ಐಎ ತಂಡದಿಂದ ಭಟ್ಕಳ ತಾಲೂಕಿನ ಎರಡು ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದೆ. ತಾಲೂಕಿನ ಸಾಗರ ರಸ್ತೆ ಹಾಗೂ ಉಮರ್ ಸ್ಟ್ರೀಟನಲ್ಲಿರುವ ಎರಡು ಮನೆಗಳ ಮೇಲೆ ಕೇಂದ್ರದ ಎನ್.ಐಎ ತಂಡದಿಂದ ಈ ದಾಳಿ ನಡೆದಿದೆ.
ಈ ಹಿಂದೆ ಬಂಧನಕ್ಕೊಳಕ್ಕಾಗಿರುವ ಭಯೋತ್ಪಾದಕ ಓರ್ವನ ಸಂಬಂಧಿಯನ್ನು ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಅತ್ಯಂತ ಗುಪ್ತವಾಗೇ ಈ ಕಾರ್ಯಾಚರಣೆ ನಡೆದಿದ್ದು, ಸ್ಥಳೀಯ ಪೊಲೀಸರಿಗೂ ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ ಎನ್ನಲಾಗಿದೆ.
ಜಿಲ್ಲೆಯ ಉನ್ನತಾಧಿಕಾರಿಗಳ ಜತೆ ಗುಪ್ತವಾಗಿ ಎನ್ಐಎ ತಂಡ ದಾಳಿ ನಡೆಸಿದೆ. ಈ ವಿಚಾರಕ್ಕಾಗಿ ನಿನ್ನೆಯಿಂದಲೇ ಭಟ್ಕಳದಲ್ಲಿ ಜಿಲ್ಲಾ ಪೊಲೀಸವರಿಷ್ಠಾಧಿಕಾರಿ ಮೊಕ್ಕಾಮ್ ಹೂಡಿದ್ದರು. ಇನ್ನೇನು ಹೆಚ್ಚಿನ ಮಾಹಿತಿ ವಿಚಾರಣೆ ಬಳಿಕವೇ ತಿಳಿದು ಬರಬೇಕಿದೆ. ಈ ಸಂಭಂದ ತಾಲೂಕಿನ ಹಲವೆಡೆ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಉತ್ತರಕನ್ನಡ ಜಿಲ್ಲೆಯ ಭಟ್ಕಳ ಅತ್ಯಂತ ಸೂಕ್ಷ್ಮ ಪ್ರದೇಶವಾಗಿ ಗುರುತಿಸಿಕೊಂಡಿದೆ. ಅಲ್ಲದೆ, ಉಗ್ರರ ಸಂಪರ್ಕ ವಿಷಯ ಬಂದಾಗ ಈ ಹಿಂದೆ ಹಲವರು ಬಾರಿ ರಾಷ್ಟ್ರಮಟ್ಟದಲ್ಲಿ ರಾಜ್ಯಮಟ್ಟದಲ್ಲಿ ಭಟ್ಕಳ ಸುದ್ದಿಯಾಗಿದೆ. ಇದೀಗ ಮತ್ತೆ ಪದೇ ಪದೇ ಉಗ್ರರ ಸಂಪರ್ಕ ವಿಷಯದಲ್ಲಿ ಭಟ್ಕಳದ ಸದ್ದು ಮಾಡುತ್ತಿದೆ.
ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ
ಪ್ರಮುಖ ಸುದ್ದಿಗಳ ಲಿಂಕ್ ಇಲ್ಲಿದೆ
- ಆರೋಗ್ಯದಲ್ಲಿ ಆಕಸ್ಮಿಕ ಏರುಪೇರು: ಲಕ್ಷ್ಮೇಶ್ವರದ ರವೀಂದ್ರ ಮುರಾರಿ ನಾಯ್ಕ ವಿಧಿವಶ
- ಅಡಿಕೆ ಧಾರಣೆ: ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ದರದ ವಿವರ ಹೇಗಿದೆ ನೋಡಿ?
- ಬಸ್ ನಿಲ್ದಾಣದಲ್ಲಿ ನಿಲ್ಲಿಸಿಟ್ಟ ಬೈಕ್ ಕಳ್ಳತನ: ನಸುಕಿನ ವೇಳೆ ಕೃತ್ಯ?
- ಕರ್ನಾಟಕ ಜ್ಯೂನಿಯರ್ ಅಥ್ಲೆಟಿಕ್ಸ್ ನಲ್ಲಿ ವಿದ್ಯಾರ್ಥಿಗಳ ಸಾಧನೆ
- ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ