Follow Us On

Google News
Important
Trending

ಮೋಜು-ಮಸ್ತಿಗಾಗಿ ನೀರಿಗಿಳಿದ ಓರ್ವ ಪ್ರವಾಸಿಗ ನೀರುಪಾಲು : ಓರ್ವನ ರಕ್ಷಣೆ: ಈಜಿ ದಡ ಸೇರಿದ ಆರು ಮಂದಿ

ಗೋಕರ್ಣ: ನೀರಿಗಿಳಿಯೋದು ಬೇಡ ಬೇಡ ಎಂದು ಎಷ್ಟೆ ಹೇಳಿಕೊಳ್ಳುತ್ತಿದ್ದರೂ ಎಲ್ಲಾ ಎಚ್ಚರಿಕೆಯನ್ನು ಮೀರಿ, ಪ್ರವಾಸಿಗರು ಸಮುದ್ರಕ್ಕೆ ಇಳಿಯುತ್ತಿದ್ದಾರೆ. ಇದರ ಪರಿಣಾಮವಾಗಿ ಮೋಜು ಮಸ್ತಿ ಮಾಡಲುಹೋಗಿ ಪ್ರಾಣ ಕಳೆದುಕೊಂಡವರ ಸಂಖ್ಯೆ ಇತ್ತೀಚಿಗೆ ಹೆಚ್ಚುತ್ತಿದೆ. ಗೋಕರ್ಣದಲ್ಲಿ ಇಂದು ಮತ್ತೊಂದು ಇದೇ ರೀತಿಯ ಪ್ರಕರಣ ವರದಿಯಾಗಿದೆ. ಬೆಂಗಳೂರಿನಿoದ ಗೋಕರ್ಣಕ್ಕೆ ಎಂಟು ಜನ ಸ್ನೇಹಿತರು ಪ್ರವಾಸಕ್ಕೆ ಬಂದಿದ್ದರು.

ಈ ವೇಳೆ ಸ್ಥಳೀಯರ ಎಚ್ಚರಿಕೆ ನಡುವೆಯೂ 8 ಪ್ರವಾಸಿಗರು ಈಜಲು ಸಮುದ್ರಕ್ಕೆ ಇಳಿದಿದ್ದಾರೆ. ಈ ವೇಳೆ ಅಲೆಯ ಅಬ್ಬರಕ್ಕೆ ಇಬ್ಬರು ಕೊಚ್ಚಿಹೋಗಿದ್ದು, ಓರ್ವನನ್ನು ಲೈಫ್ ಗಾರ್ಡ್ ಮತ್ತು ಸ್ಥಳೀಯರ ನೆರವಿನಿಂದ ರಕ್ಷಿಸಲಾಗಿದೆ. ಆದರೆ, ಓರ್ವನನ್ನು ರಕ್ಷಿಸಲು ಆಗಿಲ್ಲ. ನೀರು ಪಾಲಾದ ಯುವಕನನ್ನು ಬೆಂಗಳೂರು ಬಿಟಿಎಂ ಲೇಔಟ್ ನಿವಾಸಿ ಅರುಣ ಲಕ್ಕಪ್ಪ ಎಂದು ಗುರುತಿಸಲಾಗಿದೆ. ಉಳಿದವರು ಈಡಿ ದಡ ಸೇರಿದ್ದಾರೆ. ಸಮುದ್ರ ಪಾಲಾದ ಈತನ ಪತ್ತೆಗಾಗಿ ಪೊಲೀಸರು ಹಾಗೂ ಲೈಫ್ ಗಾರ್ಡ್ ಸಿಬ್ಬಂದಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ವಿಸ್ಮಯ ನ್ಯೂಸ್, ಗೋಕರ್ಣ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button