Important
Trending

ನಿಧಾನವಾಗಿ ಹೆಚ್ಚಳ ಕಾಣುತ್ತಿದೆ ಕೋವಿಡ್: ಕೇಂದ್ರ ಸರ್ಕಾರದ ಕಳವಳಕಾರಿ ಜಿಲ್ಲೆಯ ಪಟ್ಟಿಗೆ ಉತ್ತರಕನ್ನಡ ಸೇರ್ಪಡೆ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಆತಂಕ ಪುನಃ ಪ್ರಾರಂಭವಾಗಿದ್ದು, ಕಳವಳಕಾರಿ ಜಿಲ್ಲೆಗಳ ಪಟ್ಟಿಗೆ ಉತ್ತರ ಕನ್ನಡ ಜಿಲ್ಲೆ ಸೇರ್ಪಡೆಯಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಉತ್ತರಕನ್ನಡ ಜಿಲ್ಲೆಯೂ ಸೇರಿದಂತೆ 5 ಜಿಲ್ಲೆಗಳನ್ನು ಕಳವಳಕಾರಿ ಜಿಲ್ಲೆಯೆಂದು ಆರೋಗ್ಯ ಸಚಿವಾಲಯ ಗುರುತಿಸಿದೆ. ಈ ಹಿಂದೆ ಅತಿ ಹೆಚ್ಚು ಪಾಸಿಟಿವಿಟಿ ಕಂಡುಬಂದ ಜಿಲ್ಲೆಗಳಲ್ಲಿ ದೇಶದ ಐದನೇ ಮತ್ತು ಕರ್ನಾಟಕದ ಎರಡನೇ ಜಿಲ್ಲೆಯಾಗಿ ಉತ್ತರ ಕನ್ನಡ ಜಿಲ್ಲೆಯನ್ನು ಗುರುತಿಸಲಾಗಿತ್ತು.

ಇದೀಗ ಪುನಃ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಜಾಸ್ತಿಯಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಕಣ್ಣಿಗೆ ಬಿದ್ದು ಉತ್ತರ ಕನ್ನಡ ಜಿಲ್ಲೆಯು ಕಳವಳಕಾರಿ ಜಿಲ್ಲೆಯ ಪಟ್ಟಿಗೆ ಸೇರ್ಪಡೆಗೊಂಡಿದೆ. ರಾಜ್ಯದ 5 ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗಿದ್ದು, ಇದು ಕಳೆದ 2 ವಾರಗಳಲ್ಲಿ ದೇಶದ ದೈನಂದಿನ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಲು ಕಾರಣವಾಗಿದೆ.

ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆ, ಕೊಡಗು, ಉತ್ತರ ಕನ್ನಡ, ಚಾಮರಾಜನಗರ ಹಾಗೂ ಉಡುಪಿ ಜೆಲ್ಲೆಗಳಲ್ಲಿ ಕೋವಿಡ್ ಹೆಚ್ಚಾಗಿರುವ ಕಾರಣ ಈ ಜೆಲ್ಲೆಗಳನ್ನು ಕಳವಳಕಾರಿ ಜಿಲ್ಲೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುತಿಸಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ಬ್ಯುರೋ ರಿಪೋರ್ಟ್, ವಿಸ್ಮಯ ನ್ಯೂಸ್.

Back to top button