![](http://i0.wp.com/vismaya24x7.com/wp-content/uploads/2021/08/bhatkal-news.jpg?fit=1040%2C480&ssl=1)
ಭಟ್ಕಳ: ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ 2021 ರಲ್ಲಿ ಭಟ್ಕಳದ ಶೋಟೊಕಾನ್ ಕರಾಟೆ ಇನ್ಸ್ಟಿಟ್ಯೂಟಿನ ಇಬ್ಬರು ವಿದ್ಯಾರ್ಥಿಗಳು ಚಿನ್ನದ ಪದಕ ಗೆದ್ದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
![](http://i0.wp.com/vismaya24x7.com/wp-content/uploads/2021/07/vismaya-1.png?resize=708%2C98&ssl=1)
18 ವರ್ಷ ಮೇಲ್ಪಟ್ಟವರಿಗೆ ನಡೆಸಲಾದ ರಾಜ್ಯ ಮಟ್ಟದ ಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಭಟ್ಕಳ ಶೋಟೊಕಾನ್ ಕರಾಟೆ ಇನ್ಸ್ಟಿಟ್ಯೂಟಿನ 4 ವಿದ್ಯಾರ್ಥಿಗಳು ವಿವಿಧ ವಿಭಾಗದಲ್ಲಿ ಭಾಗವಹಿಸಿದ್ದರು.
![](http://i0.wp.com/vismaya24x7.com/wp-content/uploads/2021/08/bhatkal-news-2.jpg?resize=708%2C327&ssl=1)
ಪಾಯಿಂಟ್ ಫೈಟಿಂಗ್ ಹಾಗೂ ಕ್ರಿಯೇಟಿವ್ ಫಾಮ್ ವೇಫನ್ ಮಹಿಳೆಯ ವಿಭಾಗದಲ್ಲಿ ಭಟ್ಕಳದ ಆಸರಕೇರಿಯ ನಾಗಶ್ರೀ.ವಿ.ನಾಯ್ಕ ಹಾಗೂ
ಚಿನ್ನದ ಪದಕ ಹಾಗೂ ಪಾಯಿಂಟ್ ಫೈಟಿಂಗ್ ಪುರುಷರ ವಿಭಾಗದಲ್ಲಿ ಮಹಮ್ಮದ್ ಶಮಾಜ್ ಶೇಕ್ ಚಿನ್ನದ ಪದಕ ಪಡೆದು ಗೋವಾದಲ್ಲಿ ನಡೆಯುವ ರಾಷ್ಟ್ರಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಹಾಗೂ ಕಿಕ್ ಫೈಟಿಂಗ್ ಪುರುಷರ ವಿಭಾಗದಲ್ಲಿ ಯೊಗೇಶ.ಆರ್. ನಾಯ್ಕ ಕಂಚಿನ ಪದಕ ಮತ್ತು ಲೋ
ಕೌಂಟ್ ಪುರುಷರ ವಿಭಾದಲ್ಲಿ ಕಂಚಿನ ಪದಕ ಪಡೆದುಕೊಂಡಿದ್ದಾರೆ.
![](http://i0.wp.com/vismaya24x7.com/wp-content/uploads/2021/08/bhatkal-news-3.jpg?resize=473%2C1024&ssl=1)
ಇವರಿಗೆ ಭಟ್ಕಳ ಶೋಟೊಕಾನ್ ಕರಾಟೆ ಇನ್ಸ್ಟಿಟ್ಯೂಟ್ ಹಾಗೂ ಉತ್ತರಕನ್ನಡ ಜಿಲ್ಲಾ ಕರಾಟೆ ಸ್ಪೋರ್ಟ್ಸ್ ಅಸೋಸಿಯೇಷನ್ ನ ವತಿಯಿಂದ ಧನ್ಯವಾದ ಸಲ್ಲಿಸಿದ್ದಾರೆ. ಅಲ್ಲದೆ ಕರ್ನಾಟಕ ರಾಜ್ಯ ಕಿಕ್ ಬಾಕ್ಸಿಂಗ್ ಪ್ರಧಾನ ಕಾರ್ಯದರ್ಶಿ ಪೂಜಾ ಹರ್ಷರವರು ಉತ್ತರ ಕನ್ನಡ ಜಿಲ್ಲಾ ಕಿಕ್ ಬಾಕ್ಸಿಂಗ್ ಅಸೋಸಿಯೇಷನ್ ಅಭಿಲೇಷನ್ ಗೌರವವನ್ನು ಭಟ್ಕಳದ ಕರಾಟೆ ತರಬೇತುದಾರರಾದ ಈಶ್ವರ ನಾಯ್ಕರವರಿಗೆ ನೀಡಿದ್ದಲ್ಲದೆ, ಅವರನ್ನು ಉತ್ತರ ಕನ್ನಡ ಜಿಲ್ಲಾ ಕಿಕ್ ಬಾಕ್ಸಿಂಗ್ ಅಸೋಸಿಯೇಷನ್ ಅಧ್ಯಕ್ಷರಾಗಿಯು ಕೂಡ ಆಯ್ಕೆ ಮಾಡಿದ್ದಾರೆ.
ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.
![](http://i0.wp.com/vismaya24x7.com/wp-content/uploads/2021/05/varaha-jyo-new.jpg?resize=708%2C704&ssl=1)