Follow Us On

WhatsApp Group
Important
Trending

ಪ್ರಯಾಣಿಕರನ್ನು ಇಳಿಸಿ ಹೊರಡುತ್ತಿರುವ ಸಂದರ್ಭದಲ್ಲಿ ಹಿಂಬದಿಯಿಂದ ಗುದ್ದಿದ ಕಾರು: ಆಸ್ಪತ್ರೆಯಿಂದ ಬರುತ್ತಿದ್ದ ಒಂದೇ ಕುಟುಂಬದ ಮೂವರು ಗಾಯ

ಹೊನ್ನಾವರ: ಸಾರಿಗೆ ಬಸ್ ಗೆ ಕಾರೊಂದು ಗುದ್ದಿದ‌ ಪರಿಣಾಮ‌ ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ನಡೆದಿದೆ.

ಭಟ್ಕಳ ಕಡೆಯಿಂದ ಹೊನ್ನಾವರಕ್ಕೆ ಬರುತ್ತಿದ್ದ ಸಾರಿಗೆ ಬಸ್‌ಗೆ ಹಿಂಬದಿಯಿಂದ ಇಕೋ ವಾಹನ ಗುದ್ದಿದ್ದು, ಇಕೋದಲ್ಲಿದ್ದ ಮೂವರು ಉದ್ಯಾವರ ಆಸ್ಪತ್ರೆಯಿಂದ ವಾಪಾಸಾಗುತ್ತಿದ್ದಾಗ ಈ ಘಟನೆ ನಡೆದಿದೆ.

ಭಟ್ಕಳದಿಂದ ಹೊನ್ನಾವರ ಕಡೆಗೆ ಬರುತ್ತಿದ ಕೆ ಎಸ್ ಆರ್ ಟಿ ಸಿ ಬಸ್ , ಅನಂತವಾಡಿಯ ಕೊಪ್ಪನಮಕ್ಕಿ ಸಮೀಪ ಪ್ರಯಾಣಿಕರನ್ನು ಇಳಿಸಿ ಹೊರಡುತ್ತಿರುವ ಸಂದರ್ಭದಲ್ಲಿ ಹಿಂಬದಿಯಿಂದ ಬರುತ್ತಿದ್ದ ಇಕೋ ವಾಹನದ ನಿಯಂತ್ರಣ ತಪ್ಪಿ ಬಸ್‌ನ ಹಿಂಬದಿಗೆ ಗುದ್ದಿದೆ. ಈ ಪರಿಣಾಮ ಇಕೋ ವಾಹನದಲ್ಲಿ ಇದ್ದ ಒಂದೆ ಕುಟುಂಬದ ಮೂವರಿಗೆ ಗಾಯವಾಗಿದ್ದು, ಪ್ರಾಣಾಪಯದಿಂದ ಪಾರಾಗಿದ್ದಾರೆ,

ವಾಹನ ಚಾಲಕ ಹೊನ್ನಾವರ ತಾಲೂಕಿನ ಮಾಡಗೇರಿಯ ಮಾರುತಿ ವೇಂಕಟ ನಾಯ್ಕ ಮತ್ತು ಇವರ ಸೋದರಿಗೆ ರಾಜೇಶ್ವರಿ ಪ್ರಕಾಶ ನಾಯ್ಕ, ಸಣ್ಣ ಪುಟ್ಟ ಗಾಯವಾಗಿದೆ. ಇವರ ತಾಯಿ ರಾಜೇಶ್ವರಿ ವೆಂಕಟ ನಾಯ್ಕ ಇವರಿಗೆ ಗಂಭೀರ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಸ್ಮಯ ನ್ಯೂಸ್ ಶ್ರೀಧರ್ ನಾಯ್ಕ ಹೊನ್ನಾವರ


ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.


Back to top button