Follow Us On

WhatsApp Group
Important
Trending

ಪಾಲಕರು ಮೊಬೈಲ್ ಬಳಸಬೇಡ ಎಂದಿದ್ದೆ ತಪ್ಪಾಯ್ತು: ಮನೆಯಲ್ಲಿ ಯಾರು ಇಲ್ಲದೆ ವೇಳೆ ಸಾವಿಗೆ ಶರಣಾದ ವಿದ್ಯಾರ್ಥಿನಿ

ಹೊನ್ನಾವರ: ಕೋವಿಡ್ ಸಮಯದಲ್ಲಿ ಮಕ್ಕಳು ಶಾಲೆಗೆ ತೆರಳಲು ಸಾಧ್ಯವಾಗದೆ ಮನೆಯಲ್ಲಿಯೇ ಇದ್ದು, ಮೊಬೈಲ್ ಗೀಳನ್ನು ಅಂಟಿಸಿಕೊoಡಿದ್ದಾರೆ. ಮೊಬೈಲ್ ಬಳಕೆ ಅತಿಯಾಗಿದ್ದು, ಮೊಬೈಲ್ ಸಿಗದಿದ್ದರೆ, ಸಿಟ್ಟಾಗುವುದು, ವಿಚಿತ್ರವಾಗಿ ವರ್ತಿಸುವುದು ಸಾಮಾನ್ಯವಾಗಿದೆ. ಮೊಬೈಲ್ ಬಳಸಬೇಡ ಎಂದು ಪಾಲಕರು ಬುದ್ದಿವಾದ ಹೇಳಿದಕ್ಕೆ ವಿದ್ಯಾರ್ಥಿನಿಯೊಬ್ಬಳು ಸಾವಿಗೆ ಶರಣಾದ ಘಟನೆ ಹೊನ್ನಾವರದ ಹಳದೀಪುರದಲ್ಲಿ ನಡೆದಿದೆ.

ಹೊನ್ನಾವರ ತಾಲೂಕಿನ ಹಳದೀಪುರದ ಅರ್ಪೂವ ಹರಿಕಂತ್ರ ಸಾವಿಗೆ ಶರಣಾದ ವಿದ್ಯಾರ್ಥಿನಿ. 15 ವರ್ಷದ ಈಕೆ ಪ್ರೌಢಶಾಲೆಗೆ ತೆರಳುತ್ತಿದ್ದು, ಇತ್ತಿಚೆಗೆ ಅತಿಯಾಗಿ ಮೊಬೈಲ್ ಬಳಸುತ್ತಿದ್ದಳು. ಮೊನೆಯವರು ಎಷ್ಟೆ ಬಳಸಬೇಡ ಎಂದರೂ ಮಾತನ್ನು ಕೇಳದೆ, ಮೊಬೈಲ್ ಗೀಳು ಅಂಟಿಸಿಕೊoಡಿದ್ದಳು. ಅಲ್ಲದೆ, ಮೊಬೈಲ್ ನೀಡದೆ ಇದ್ದರೆ ತಂಗಿ ಹಾಗೂ ತಮ್ಮನೊಂದಿಗೆ ಜಗಳವಾಡುತ್ತಿದ್ದಳು ಎನ್ನಲಾಗಿದೆ.

ಪಾಲಕರು ಮೊಬೈಲ್ ಕೊಡದೆ ಇದ್ದಾಗ, ಮನನೊಂದು, ಮನೆಯವರು ಕೆಲಸಕ್ಕೆ ಹೋಗಿದ್ದಾಗ ಬಾತ್‌ರೂಮ್‌ಗೆ ಹೋಗಿ ಸೀರೆಯಿಂದ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ಈ ಸಂಬoಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

Back to top button