ತೆಂಗಿನಕಾಯಿ ಹೆಕ್ಕುವ ವೇಳೆ ಕಾಲುಜಾರಿ ಬಿದ್ದು ವ್ಯಕ್ತಿ ಸಾವು : ಮದಿರೆ ಮತ್ತಿನಲ್ಲಿ ಅನಾಹುತ?

ಶಿರಸಿ: ಕೆರೆಯಲ್ಲಿ ಬರುವ ತೆಂಗಿನ ಕಾಯಿ ಹೆಕ್ಕುವ ಕೆಲಸದಲ್ಲಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ಕೋಟೆ ಕೆರೆಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಸಾರಾಯಿ ಮತ್ತಿನಲ್ಲಿದ್ದು, ಈ ವೇಳೆ ಕಾಲುಜಾರಿ ಬಿದ್ದಿದ್ದಾನೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮೃತ ವ್ಯಕ್ತಿಯನ್ನು ಆರೆಕೊಪ್ಪದ ಶಂಕ್ರಪ್ಪ ಯಲ್ಲಪ್ಪ ನಾಗೋಹಿ ಎಂದು ಗುರುತಿಸಲಾಗಿದೆ. ಬುಧವಾರ ತಡ ರಾತ್ರಿಯ ವೇಳೆಗೆ ಈ ಘಟನೆ ನಡೆದಿರಬಹುದೆಂದು ಪೊಲೀಸರು ಶಂಕಿಸಿದ್ದು, ಬೆಳಿಗ್ಗೆ ಕೆರೆಯಲ್ಲಿ ದೇಹ ತೇಲಿಬಂದ ನಂತರ ವಿಷಯ ಬೆಳಕಿಗೆ ಬಂದಿದೆ. ಶಿರಸಿ ಮಾರುಕಟ್ಟೆ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸಾವು ಹೇಗೆ ಸಂಭವಿಸಿರಬಹುದು ಎನ್ನುವುದರ ಬಗ್ಗೆ ಪೊಲೀಸ್ ತನಿಖೆಯ ನಂತರದಲ್ಲಿ ಸಂಪೂರ್ಣ ಮಾಹಿತಿ ತಿಳಿದು ಬರಬೇಕಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

ವಿಸ್ಮಯ ನ್ಯೂಸ್, ಶಿರಸಿ

Exit mobile version